ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಈ ವೇಳೆ ನಾಡದೇವತೆಗೆ ಸಿಎಂ ಹಾಗೂ ಡಿಸಿಎಂ ತಲಾ 2 ಸಾವಿರ ಕಾಣಿಗೆ ನೀಡಿದರು. ಅಲ್ಲದೆ ತಾಯಿ ಚಾಮುಂಡಿಗೆ ಹಸಿರು ಮತ್ತು ಕೆಂಪು ರೇಷ್ಮೆ ಸೀರೆ ಅರ್ಪಣೆ ಮಾಡಿ, ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಬಳಿಕ ಈಡುಗಾಯಿ ಹೊಡೆದು ಇಬ್ಬರೂ ಹರಕೆ ತೀರಿಸಿದರು.
ಸರ್ಕಾರ 100 ದಿನ ಪೂರೈಸಿದ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಮಗೆ ಇದೇನು ಸವಾಲು ಎನ್ನಿಸಲಿಲ್ಲ. ಗ್ಯಾರೆಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ. ಮಾತು ಕೊಟ್ಟಂತೆ ಗ್ಯಾರೆಂಟಿಗಳ ಜಾರಿ ಮಾಡುತ್ತಿದ್ದೇವೆ. ಖುದ್ದು ಪಿಎಂ ಕೂಡ ಗ್ಯಾರೆಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಆದರೆ ಸರ್ಕಾರ ರಾಜ್ಯ ಯಾವ ದಿವಾಳಿಯೂ ಆಗಿಲ್ಲ.
ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ. ಗೃಹ ಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ಖರ್ಚಾಗುತ್ತೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು ಹೇಳಿದರು.
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…
ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…
ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…
ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…
ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…