ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಈ ವೇಳೆ ನಾಡದೇವತೆಗೆ ಸಿಎಂ ಹಾಗೂ ಡಿಸಿಎಂ ತಲಾ 2 ಸಾವಿರ ಕಾಣಿಗೆ ನೀಡಿದರು. ಅಲ್ಲದೆ ತಾಯಿ ಚಾಮುಂಡಿಗೆ ಹಸಿರು ಮತ್ತು ಕೆಂಪು ರೇಷ್ಮೆ ಸೀರೆ ಅರ್ಪಣೆ ಮಾಡಿ, ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಬಳಿಕ ಈಡುಗಾಯಿ ಹೊಡೆದು ಇಬ್ಬರೂ ಹರಕೆ ತೀರಿಸಿದರು.
ಸರ್ಕಾರ 100 ದಿನ ಪೂರೈಸಿದ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಮಗೆ ಇದೇನು ಸವಾಲು ಎನ್ನಿಸಲಿಲ್ಲ. ಗ್ಯಾರೆಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ. ಮಾತು ಕೊಟ್ಟಂತೆ ಗ್ಯಾರೆಂಟಿಗಳ ಜಾರಿ ಮಾಡುತ್ತಿದ್ದೇವೆ. ಖುದ್ದು ಪಿಎಂ ಕೂಡ ಗ್ಯಾರೆಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಆದರೆ ಸರ್ಕಾರ ರಾಜ್ಯ ಯಾವ ದಿವಾಳಿಯೂ ಆಗಿಲ್ಲ.
ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ. ಗೃಹ ಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ಖರ್ಚಾಗುತ್ತೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು ಹೇಳಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…