ಮೈಸೂರು

ದಸರಾ ಕುಸ್ತಿ ಪಂದ್ಯಾವಳಿಗೆ ಸಿಎಂ ಚಾಲನೆ

ಮೈಸೂರು : ದಸರಾ ಮಹೋತ್ಸವದ ಪ್ರಮುಖ ಕ್ರೀಡೆ ದಸರಾ ಕುಸ್ತಿ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು.

ನಗರದ ವಸ್ತು ಪ್ರದರ್ಶನ ಆವರಣದಲ್ಲಿರುವ ದೇವರಾಜ ಅರಸು ವಿವಿದ್ದೋದ್ದೇಶ ಕ್ರೀಡಾಂಗಣದಲ್ಲಿ ಜರುಗಿದ ಕುಸ್ತಿ ಪಂದ್ಯಾವಳಿಯನ್ನು ರವಿವಾರ ಕುಸ್ತಿ ಗದೆ ಎತ್ತುವ ಮೂಲಕ ಉದ್ಘಾಟಿಸಿದರು.

ದಸರಾ ಕುಸ್ತಿ ಎಂದರೆ ಜಗತ್ಪ್ರಸಿದ್ಧ. ಈ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲು ರಾಜ್ಯ, ಹೊರ ರಾಜ್ಯಗಳಿಂದಲೂ ಪೈಲ್ವಾನರು ಬರುತ್ತಾರೆ.

ದಾವಣಗೆರೆಯ ಪೈ.ಕಾರ್ತಿಕ್ ಕಾಟೆ ಮತ್ತು ದೆಹಲಿಯ ಪೈ.ವಿಕಿ ಅವರ ನಡುವೆ ನಡೆದ ಅರ್ಧ ಗಂಟೆ ನಡೆದ ಕುಸ್ತಿ ಪಂದ್ಯಾವಳಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ವೀಕ್ಷಿಸಿದರು.

ನಂತರ ಚಿಕ್ಕಹಳ್ಳಿಯ ಪೈಲ್ವಾನ್ ರವಿ ಮತ್ತು ಪವನ್ ರವರ ನಡುವೆ ಕುಸ್ತಿ ಪಂದ್ಯಾವಳಿ ನಡೆಯಿತು.

ಇದೇ ವೇಳೆ ಕುಸ್ತಿ ಪೈಲ್ವಾನರ ಸಂಘದಿಂದ ಕುಸ್ತಿ ಹಾಸ್ಟೆಲ್ ಪ್ರಾರಂಭ ಮಾಡಲು ಮನವಿ ಸಲ್ಲಿಸಲಾಯಿತು.

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಡಿ‌.ರವಿಶಂಕರ್, ಟಿ‌ಎಸ್.ಶ್ರೀವತ್ಸ, ಅನಿಲ್ ಚಿಕ್ಕಮಾದು, ಕೃಷ್ಣಮೂರ್ತಿ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ವಿಧಾನ ಪರಿಷತ್ ಶಾಸಕರಾದ ಮಂಜೇಗೌಡ, ತಿಮ್ಮಯ್ಯ, ಮಹಾ ಪೌರರದ ಶಿವಕುಮಾರ್, ಜಿಲ್ಲಾಧಿಕಾರಿಗಳಾದ ಡಾ ಕೆ. ವಿ ರಾಜೇಂದ್ರ, ಪೊಲೀಸ್ ಆಯುಕ್ತರಾದ ರಮೇಶ್ ಬಿ. ಸೀಮಾ ಲಾಟ್ಕರ್, ಅಪರ ಪೊಲೀಸ್ ಅಧೀಕ್ಷಕರಾದ ಡಾ. ನಂದಿನಿ, ಉಪ ಮಹಾಪೌರರಾದ ಜಿ ರೂಪ, ನಂಜನಗೂಡು ಪೊಲೀಸ್ ಅಧೀಕ್ಷಕರಾದ ಗೋವಿಂದರಾಜು ಹಾಗೂ ದಸರಾ ಕುಸ್ತಿ ಸಮಿತಿಯ ಅಧಿಕಾರಿಗಳು ಭಾಗವಹಿಸಿದರು.

andolanait

Recent Posts

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ…

31 mins ago

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

41 mins ago

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…

58 mins ago

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌…

2 hours ago

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…

2 hours ago

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…

3 hours ago