ಮೈಸೂರು : ದಸರಾ ಮಹೋತ್ಸವದ ಪ್ರಮುಖ ಕ್ರೀಡೆ ದಸರಾ ಕುಸ್ತಿ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು.
ನಗರದ ವಸ್ತು ಪ್ರದರ್ಶನ ಆವರಣದಲ್ಲಿರುವ ದೇವರಾಜ ಅರಸು ವಿವಿದ್ದೋದ್ದೇಶ ಕ್ರೀಡಾಂಗಣದಲ್ಲಿ ಜರುಗಿದ ಕುಸ್ತಿ ಪಂದ್ಯಾವಳಿಯನ್ನು ರವಿವಾರ ಕುಸ್ತಿ ಗದೆ ಎತ್ತುವ ಮೂಲಕ ಉದ್ಘಾಟಿಸಿದರು.
ದಸರಾ ಕುಸ್ತಿ ಎಂದರೆ ಜಗತ್ಪ್ರಸಿದ್ಧ. ಈ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲು ರಾಜ್ಯ, ಹೊರ ರಾಜ್ಯಗಳಿಂದಲೂ ಪೈಲ್ವಾನರು ಬರುತ್ತಾರೆ.
ದಾವಣಗೆರೆಯ ಪೈ.ಕಾರ್ತಿಕ್ ಕಾಟೆ ಮತ್ತು ದೆಹಲಿಯ ಪೈ.ವಿಕಿ ಅವರ ನಡುವೆ ನಡೆದ ಅರ್ಧ ಗಂಟೆ ನಡೆದ ಕುಸ್ತಿ ಪಂದ್ಯಾವಳಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ವೀಕ್ಷಿಸಿದರು.
ನಂತರ ಚಿಕ್ಕಹಳ್ಳಿಯ ಪೈಲ್ವಾನ್ ರವಿ ಮತ್ತು ಪವನ್ ರವರ ನಡುವೆ ಕುಸ್ತಿ ಪಂದ್ಯಾವಳಿ ನಡೆಯಿತು.
ಇದೇ ವೇಳೆ ಕುಸ್ತಿ ಪೈಲ್ವಾನರ ಸಂಘದಿಂದ ಕುಸ್ತಿ ಹಾಸ್ಟೆಲ್ ಪ್ರಾರಂಭ ಮಾಡಲು ಮನವಿ ಸಲ್ಲಿಸಲಾಯಿತು.
ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಡಿ.ರವಿಶಂಕರ್, ಟಿಎಸ್.ಶ್ರೀವತ್ಸ, ಅನಿಲ್ ಚಿಕ್ಕಮಾದು, ಕೃಷ್ಣಮೂರ್ತಿ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ವಿಧಾನ ಪರಿಷತ್ ಶಾಸಕರಾದ ಮಂಜೇಗೌಡ, ತಿಮ್ಮಯ್ಯ, ಮಹಾ ಪೌರರದ ಶಿವಕುಮಾರ್, ಜಿಲ್ಲಾಧಿಕಾರಿಗಳಾದ ಡಾ ಕೆ. ವಿ ರಾಜೇಂದ್ರ, ಪೊಲೀಸ್ ಆಯುಕ್ತರಾದ ರಮೇಶ್ ಬಿ. ಸೀಮಾ ಲಾಟ್ಕರ್, ಅಪರ ಪೊಲೀಸ್ ಅಧೀಕ್ಷಕರಾದ ಡಾ. ನಂದಿನಿ, ಉಪ ಮಹಾಪೌರರಾದ ಜಿ ರೂಪ, ನಂಜನಗೂಡು ಪೊಲೀಸ್ ಅಧೀಕ್ಷಕರಾದ ಗೋವಿಂದರಾಜು ಹಾಗೂ ದಸರಾ ಕುಸ್ತಿ ಸಮಿತಿಯ ಅಧಿಕಾರಿಗಳು ಭಾಗವಹಿಸಿದರು.
ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…
ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…
24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…
ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ…
ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ…