ಮೈಸೂರು : ದಸರಾ ಮಹೋತ್ಸವದ ಪ್ರಮುಖ ಕ್ರೀಡೆ ದಸರಾ ಕುಸ್ತಿ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು.
ನಗರದ ವಸ್ತು ಪ್ರದರ್ಶನ ಆವರಣದಲ್ಲಿರುವ ದೇವರಾಜ ಅರಸು ವಿವಿದ್ದೋದ್ದೇಶ ಕ್ರೀಡಾಂಗಣದಲ್ಲಿ ಜರುಗಿದ ಕುಸ್ತಿ ಪಂದ್ಯಾವಳಿಯನ್ನು ರವಿವಾರ ಕುಸ್ತಿ ಗದೆ ಎತ್ತುವ ಮೂಲಕ ಉದ್ಘಾಟಿಸಿದರು.
ದಸರಾ ಕುಸ್ತಿ ಎಂದರೆ ಜಗತ್ಪ್ರಸಿದ್ಧ. ಈ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲು ರಾಜ್ಯ, ಹೊರ ರಾಜ್ಯಗಳಿಂದಲೂ ಪೈಲ್ವಾನರು ಬರುತ್ತಾರೆ.
ದಾವಣಗೆರೆಯ ಪೈ.ಕಾರ್ತಿಕ್ ಕಾಟೆ ಮತ್ತು ದೆಹಲಿಯ ಪೈ.ವಿಕಿ ಅವರ ನಡುವೆ ನಡೆದ ಅರ್ಧ ಗಂಟೆ ನಡೆದ ಕುಸ್ತಿ ಪಂದ್ಯಾವಳಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ವೀಕ್ಷಿಸಿದರು.
ನಂತರ ಚಿಕ್ಕಹಳ್ಳಿಯ ಪೈಲ್ವಾನ್ ರವಿ ಮತ್ತು ಪವನ್ ರವರ ನಡುವೆ ಕುಸ್ತಿ ಪಂದ್ಯಾವಳಿ ನಡೆಯಿತು.
ಇದೇ ವೇಳೆ ಕುಸ್ತಿ ಪೈಲ್ವಾನರ ಸಂಘದಿಂದ ಕುಸ್ತಿ ಹಾಸ್ಟೆಲ್ ಪ್ರಾರಂಭ ಮಾಡಲು ಮನವಿ ಸಲ್ಲಿಸಲಾಯಿತು.
ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಡಿ.ರವಿಶಂಕರ್, ಟಿಎಸ್.ಶ್ರೀವತ್ಸ, ಅನಿಲ್ ಚಿಕ್ಕಮಾದು, ಕೃಷ್ಣಮೂರ್ತಿ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ವಿಧಾನ ಪರಿಷತ್ ಶಾಸಕರಾದ ಮಂಜೇಗೌಡ, ತಿಮ್ಮಯ್ಯ, ಮಹಾ ಪೌರರದ ಶಿವಕುಮಾರ್, ಜಿಲ್ಲಾಧಿಕಾರಿಗಳಾದ ಡಾ ಕೆ. ವಿ ರಾಜೇಂದ್ರ, ಪೊಲೀಸ್ ಆಯುಕ್ತರಾದ ರಮೇಶ್ ಬಿ. ಸೀಮಾ ಲಾಟ್ಕರ್, ಅಪರ ಪೊಲೀಸ್ ಅಧೀಕ್ಷಕರಾದ ಡಾ. ನಂದಿನಿ, ಉಪ ಮಹಾಪೌರರಾದ ಜಿ ರೂಪ, ನಂಜನಗೂಡು ಪೊಲೀಸ್ ಅಧೀಕ್ಷಕರಾದ ಗೋವಿಂದರಾಜು ಹಾಗೂ ದಸರಾ ಕುಸ್ತಿ ಸಮಿತಿಯ ಅಧಿಕಾರಿಗಳು ಭಾಗವಹಿಸಿದರು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…