ಮೈಸೂರು : ರಾಜ್ಯದಲ್ಲಿ ಸರಿಯಾದ ಯೋಜನೆಗಳನ್ನು ಜಾರಿಗೆ ತರುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳು ಹೇಗೆಲ್ಲಾ ಅನುಷ್ಠಾನ ಆಗಿವೆ ಎಂಬುದರ ಚರ್ಚೆ ಆಗಬೇಕಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ದಾಖಲೆ ಬರೆದಿರುವ ಬಗ್ಗೆ ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಾಜ ಅರಸು ಅವರು ತಮ್ಮ ಅವಧಿಯಲ್ಲಿ ಒಂದು ಕ್ರಾಂತಿ ತಂದಿದ್ದರು. ಗ್ರಾಮಾಂತರ ಮಟ್ಟದಲ್ಲಿ ಇಂದಿಗೂ ಅವರನ್ನು ಹೆಚ್ಚು ನೆನೆಯುತ್ತಾರೆ. ಆದರೆ, ತವರು ಜಿಲ್ಲೆಯಲ್ಲಿ ಸಿದ್ದರಾಮಯ್ಯ ಅವರ ಕೊಡುಗೆ ಏನು? ಸಿದ್ದರಾಮಯ್ಯ ಅವರು ಯಾವುದೇ ಅಭಿವೃದ್ಧಿಯನ್ನೂ ಮಾಡಿಲ್ಲ. ತವರಿಗಾಗಿ ಅವರಿಂದ ಯಾವುದೇ ಕೊಡುಗೆ ಸಿಕ್ಕಿಲ್ಲ ಎಂದು ಟೀಕಿಸಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ನಮ್ಮ ತಕರಾರಿಲ್ಲ. ಆದರೆ, ಗ್ಯಾರಂಟಿ ಯೋಜನೆ ಸರಿಯಾಗಿ ನಡೆಯುತ್ತಿಲ್ಲ. ಗೃಹಲಕ್ಷ್ಮಿಹಣ ನಿಜಕ್ಕೂ ಬರುತ್ತಿದೆಯೇ? ಯುವನಿಧಿ ಈವರೆಗೆ ಅನುಷ್ಠಾನಕ್ಕೆ ಬಂದಿಲ್ಲ. ಕರೆಂಟ್ ಬಿಲ್ ಹಣವನ್ನು ಎಲ್ಲೋ ಕಿತ್ತು ಎಲ್ಲೋ ಕೊಡುತ್ತಿದ್ದಾರೆ. ಫ್ರೀ ಬಸ್ ಯೋಜನೆಯಿಂದಾಗಿ ಕೆಎಸ್ಆರ್ಟಿಸಿ ಆರ್ಥಿಕ ನಷ್ಟದಲ್ಲಿದ್ದು, ಈ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡುವುದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ಕಾಂಗ್ರೆಸ್ ನಾಯಕರೇ ಹೇಳಬೇಕು. ನಮಗೆ ಸಿಎಂ ಬದಲಾವಣೆ ಬಗ್ಗೆ ಚಿಂತೆ ಇಲ್ಲ. ಜನರಿಗೆ ಒಳ್ಳೆಯ ಕಾನೂನು ಸುವ್ಯವಸ್ಥೆ ಕೊಡುವ ಮುಖ್ಯಮಂತ್ರಿ ಬೇಕಾಗಿದೆ. ಆದರೆ, ಸಿಎಂ ಬದಲಾವಣೆಯಿಂದ ಇದು ಸಾಧ್ಯವಿದೆ ಎಂದು ನಮಗೆ ಅನಿಸುತ್ತಿಲ್ಲ ಎಂದರು.
ಪಾಟ್ನಾ: ಬಿಹಾರದ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳಿನಲ್ಲೇ ನಿತೀಶ್ ಕುಮಾರ್ ಅವರು ಇಂದು…
ಬೆಂಗಳೂರು: ಹತ್ತು ಹಲವಾರು ನಿರೀಕ್ಷೆಗಳೊಂದಿಗೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ 17ನೇ ಐತಿಹಾಸಿಕ ಬಜೆಟ್ ಮಂಡನೆಯ…
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…