ಮೈಸೂರು

ಅಭಿವೃದ್ಧಿಯಲ್ಲಿ ಸಿಎಂ ವಿಫಲ : ಸಂಸದ ಯದುವೀರ್‌

ಮೈಸೂರು : ರಾಜ್ಯದಲ್ಲಿ ಸರಿಯಾದ ಯೋಜನೆಗಳನ್ನು ಜಾರಿಗೆ ತರುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳು ಹೇಗೆಲ್ಲಾ ಅನುಷ್ಠಾನ ಆಗಿವೆ ಎಂಬುದರ ಚರ್ಚೆ ಆಗಬೇಕಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ದಾಖಲೆ ಬರೆದಿರುವ ಬಗ್ಗೆ ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಾಜ ಅರಸು ಅವರು ತಮ್ಮ ಅವಧಿಯಲ್ಲಿ ಒಂದು ಕ್ರಾಂತಿ ತಂದಿದ್ದರು. ಗ್ರಾಮಾಂತರ ಮಟ್ಟದಲ್ಲಿ ಇಂದಿಗೂ ಅವರನ್ನು ಹೆಚ್ಚು ನೆನೆಯುತ್ತಾರೆ. ಆದರೆ, ತವರು ಜಿಲ್ಲೆಯಲ್ಲಿ ಸಿದ್ದರಾಮಯ್ಯ ಅವರ ಕೊಡುಗೆ ಏನು? ಸಿದ್ದರಾಮಯ್ಯ ಅವರು ಯಾವುದೇ ಅಭಿವೃದ್ಧಿಯನ್ನೂ ಮಾಡಿಲ್ಲ. ತವರಿಗಾಗಿ ಅವರಿಂದ ಯಾವುದೇ ಕೊಡುಗೆ ಸಿಕ್ಕಿಲ್ಲ ಎಂದು ಟೀಕಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ನಮ್ಮ ತಕರಾರಿಲ್ಲ. ಆದರೆ, ಗ್ಯಾರಂಟಿ ಯೋಜನೆ ಸರಿಯಾಗಿ ನಡೆಯುತ್ತಿಲ್ಲ. ಗೃಹಲಕ್ಷ್ಮಿಹಣ ನಿಜಕ್ಕೂ ಬರುತ್ತಿದೆಯೇ? ಯುವನಿಧಿ ಈವರೆಗೆ ಅನುಷ್ಠಾನಕ್ಕೆ ಬಂದಿಲ್ಲ. ಕರೆಂಟ್ ಬಿಲ್ ಹಣವನ್ನು ಎಲ್ಲೋ ಕಿತ್ತು ಎಲ್ಲೋ ಕೊಡುತ್ತಿದ್ದಾರೆ. ಫ್ರೀ ಬಸ್ ಯೋಜನೆಯಿಂದಾಗಿ ಕೆಎಸ್‌ಆರ್‌ಟಿಸಿ ಆರ್ಥಿಕ ನಷ್ಟದಲ್ಲಿದ್ದು, ಈ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡುವುದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ಕಾಂಗ್ರೆಸ್ ನಾಯಕರೇ ಹೇಳಬೇಕು. ನಮಗೆ ಸಿಎಂ ಬದಲಾವಣೆ ಬಗ್ಗೆ ಚಿಂತೆ ಇಲ್ಲ. ಜನರಿಗೆ ಒಳ್ಳೆಯ ಕಾನೂನು ಸುವ್ಯವಸ್ಥೆ ಕೊಡುವ ಮುಖ್ಯಮಂತ್ರಿ ಬೇಕಾಗಿದೆ. ಆದರೆ, ಸಿಎಂ ಬದಲಾವಣೆಯಿಂದ ಇದು ಸಾಧ್ಯವಿದೆ ಎಂದು ನಮಗೆ ಅನಿಸುತ್ತಿಲ್ಲ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago