ಮೈಸೂರು

ಡ್ರ್ಯಾಗನ್‌ ಪಾಂಡ್‌ ಉದ್ಘಾಟಿಸಿದ ಸಿಎಂ ; ಲೇಸರ್‌ನಲ್ಲಿ ಸಿದ್ಧರಾಮಯ್ಯ ಯಶೋಗಾಥೆ

ಮೈಸೂರು : ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ ಭಾರತದಲ್ಲೇ ಪ್ರಥಮವಾಗಿ ನಿರ್ಮಿಸಲಾಗಿರುವ ರಾಜೀವ್ ಗಾಂಧಿ ಡ್ರಾಗನ್ ಪಾಂಡ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಉದ್ಘಾಟಿಸಿದರು.

ಸಂಭ್ರಮ
ರಾಜೀವ್ ಗಾಂಧಿ ಡ್ರಾಗನ್ ಪಾಂಡ್ ಪ್ರದರ್ಶನದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ನಿರ್ಮಿಸಿರುವ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆಯನ್ನು ವಿನೂತವಾಗಿ ಸಂಭ್ರಮಿಸಿದರು. ವಿನೂತನವಾದ ಡ್ರಾಗನ್ ಆಕ್ಷನ್ ಪ್ರದರ್ಶನ, ಪೈಯರ್ ಫಾಗ್, ಬಣ್ಣ ಬಣ್ಣದ ವಿದ್ಯುತ್ ದೀಪಗಳ ಪ್ರದರ್ಶನ, ಲೇಸರ್ ಪ್ರದರ್ಶನ ಅತ್ಯಂತ ಮನರಂಜನೀಯವಾಗಿ ಗಮನ ಸೆಳೆಯಿತು.

ಲೇಸರ್‌ನಲ್ಲಿ ಸಿದ್ಧರಾಮಯ್ಯ ಯಶೋಗಾಥೆ
ಮಾಜಿ ಮುಖ್ಯಮಂತ್ರಿ ಡಾ.ಡಿ.ದೇವರಾಜ ಅರಸ್ ಅವರ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಮುರಿದ ಪ್ರಯುಕ್ತ ೭ ವರ್ಷ ೨೩೮ ದಿನಗಳು ಮುಖ್ಯಮಂತ್ರಿಯಾಗಿರುವ ಸಿದ್ಧರಾಮಯ್ಯ ಅವರ ದಾಖಲೆಯ ನೆನಪಾರ್ಥವಾಗಿ ವಸ್ತು ಪ್ರದರ್ಶನದಿಂದ ಸಿದ್ಧರಾಮಯ್ಯ ಜೀವನ, ಬೆಳೆದು ಬಂದ ಹಾದಿ, ರಾಜಕೀಯ ಜೀವನ, ಮುಖ್ಯಮಂತ್ರಿಯಾಗಿ ನೀಡಿದ ಕೊಡುಗೆಗಳು ಕುರಿತಾಗಿ ಸಿದ್ಧರಾಮಯ್ಯ ಅವರ ಯಶೋಗಾಥೆಯನ್ನು ಲೇಸರ್ ಪ್ರದರ್ಶನದ ಮೂಲಕ ಪ್ರದರ್ಶಸಿಸಲಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

8 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

8 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

8 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

8 hours ago