ಮೈಸೂರು

ಸಾಮಾಜಿಕ ಕಾಳಜಿಯುಳ್ಳ ಸಿನಿಮಾ ಕಣ್ಮರೆ : ಸಿ.ಎಂ ವಿಷಾಧ

ಮೈಸೂರು : ಈಗ ಸಾಮಾಜಿಕ ಕಾಳಜಿಯುಳ್ಳ ಸಿನಿಮಾಗಳು ಕಣ್ಮರೆಯಾಗಿವೆ. ಹೀಗಾಗಿ ಸಿನಿ ಪ್ರಿಯರು ಕೂಡ ಸಿನಿಮಾ ನೋಡುವುದನ್ನು ಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಷಾಧಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು 19 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದರು.

ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜ ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿ ಎಂದು ಕರೆ ನೀಡಿದರು.

ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲಾ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು ಎಂದರು.

ಇದನ್ನೂ ಓದಿ:-ಡಿಸೆಂಬರ್‌ ಅಂತ್ಯಕ್ಕೆ ಗ್ರೇಟರ್‌ ಮೈಸೂರು ಚಾಲ್ತಿ : ನಗರಾಭಿವೃದ್ಧ ಸಚಿವ ಸುರೇಶ್‌

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು 160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ಹಿಂದಿನ ಸರ್ಕಾರ ಆಯಾ ವರ್ಷವೇ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸದ ಕಾರಣಕ್ಕೇ 2018ರ ಸಾಲಿನಿಂದ ಪ್ರಶಸ್ತಿಗಳು ಬಾಕಿ ಉಳಿದಿವೆ. ಇದು ತಪ್ಪು ಹೀಗಾಗಬಾರದು. ಆದ್ದರಿಂದ ನಮ್ಮ ಸರ್ಕಾರ ಇನ್ನು ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚಿಸಲಾಗಿದೆ ಎಂದರು.

ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ. ಇಂದು ಎರಡು ವರ್ಷದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಹಳೆ ಸರ್ಕಾರದ ಅವಧಿಯ ಇನ್ನೆರಡು ವರ್ಷದ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ವೇದಿಕೆಯಲ್ಲೇ ಸೂಚನೆ ನೀಡಿದರು.

ಮೊದಲೆಲ್ಲಾ ಸಿನಿಮಾಗಳ ಸಂಖ್ಯೆ ಕಡಿಮೆ ಇತ್ತು. ನಾವು ನೋಡಿದ್ದನ್ನೇ ಮತ್ತೆ ಮತ್ತೆ ನೋಡುತ್ತಿದ್ದೆವು. ಈಗ ಸಿಕ್ಕಾಪಟ್ಟೆ ಸಿನಿಮಾಗಳು ಬರುತ್ತಿವೆ. ಆದರೆ, ಸಾಮಾಜಿಕ ಕಾಳಜಿ ಮತ್ತು ಗುಣಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಈಗ ಸಿನಿಮಾ ನೋಡುವುದನ್ನೇ ಕಡಿಮೆ ಮಾಡಿದ್ದೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

13 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

13 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

14 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

14 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

14 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

14 hours ago