ಮೈಸೂರು : ಈಗ ಸಾಮಾಜಿಕ ಕಾಳಜಿಯುಳ್ಳ ಸಿನಿಮಾಗಳು ಕಣ್ಮರೆಯಾಗಿವೆ. ಹೀಗಾಗಿ ಸಿನಿ ಪ್ರಿಯರು ಕೂಡ ಸಿನಿಮಾ ನೋಡುವುದನ್ನು ಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಷಾಧಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು 19 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.
ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದರು.
ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜ ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿ ಎಂದು ಕರೆ ನೀಡಿದರು.
ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲಾ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು ಎಂದರು.
ಇದನ್ನೂ ಓದಿ:-ಡಿಸೆಂಬರ್ ಅಂತ್ಯಕ್ಕೆ ಗ್ರೇಟರ್ ಮೈಸೂರು ಚಾಲ್ತಿ : ನಗರಾಭಿವೃದ್ಧ ಸಚಿವ ಸುರೇಶ್
ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು 160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.
ಹಿಂದಿನ ಸರ್ಕಾರ ಆಯಾ ವರ್ಷವೇ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸದ ಕಾರಣಕ್ಕೇ 2018ರ ಸಾಲಿನಿಂದ ಪ್ರಶಸ್ತಿಗಳು ಬಾಕಿ ಉಳಿದಿವೆ. ಇದು ತಪ್ಪು ಹೀಗಾಗಬಾರದು. ಆದ್ದರಿಂದ ನಮ್ಮ ಸರ್ಕಾರ ಇನ್ನು ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚಿಸಲಾಗಿದೆ ಎಂದರು.
ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ. ಇಂದು ಎರಡು ವರ್ಷದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಹಳೆ ಸರ್ಕಾರದ ಅವಧಿಯ ಇನ್ನೆರಡು ವರ್ಷದ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ವೇದಿಕೆಯಲ್ಲೇ ಸೂಚನೆ ನೀಡಿದರು.
ಮೊದಲೆಲ್ಲಾ ಸಿನಿಮಾಗಳ ಸಂಖ್ಯೆ ಕಡಿಮೆ ಇತ್ತು. ನಾವು ನೋಡಿದ್ದನ್ನೇ ಮತ್ತೆ ಮತ್ತೆ ನೋಡುತ್ತಿದ್ದೆವು. ಈಗ ಸಿಕ್ಕಾಪಟ್ಟೆ ಸಿನಿಮಾಗಳು ಬರುತ್ತಿವೆ. ಆದರೆ, ಸಾಮಾಜಿಕ ಕಾಳಜಿ ಮತ್ತು ಗುಣಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಈಗ ಸಿನಿಮಾ ನೋಡುವುದನ್ನೇ ಕಡಿಮೆ ಮಾಡಿದ್ದೇನೆ ಎಂದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…