ಮೈಸೂರು

ಸಾಮಾಜಿಕ ಕಾಳಜಿಯುಳ್ಳ ಸಿನಿಮಾ ಕಣ್ಮರೆ : ಸಿ.ಎಂ ವಿಷಾಧ

ಮೈಸೂರು : ಈಗ ಸಾಮಾಜಿಕ ಕಾಳಜಿಯುಳ್ಳ ಸಿನಿಮಾಗಳು ಕಣ್ಮರೆಯಾಗಿವೆ. ಹೀಗಾಗಿ ಸಿನಿ ಪ್ರಿಯರು ಕೂಡ ಸಿನಿಮಾ ನೋಡುವುದನ್ನು ಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಷಾಧಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು 19 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದರು.

ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜ ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿ ಎಂದು ಕರೆ ನೀಡಿದರು.

ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲಾ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು ಎಂದರು.

ಇದನ್ನೂ ಓದಿ:-ಡಿಸೆಂಬರ್‌ ಅಂತ್ಯಕ್ಕೆ ಗ್ರೇಟರ್‌ ಮೈಸೂರು ಚಾಲ್ತಿ : ನಗರಾಭಿವೃದ್ಧ ಸಚಿವ ಸುರೇಶ್‌

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು 160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ಹಿಂದಿನ ಸರ್ಕಾರ ಆಯಾ ವರ್ಷವೇ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸದ ಕಾರಣಕ್ಕೇ 2018ರ ಸಾಲಿನಿಂದ ಪ್ರಶಸ್ತಿಗಳು ಬಾಕಿ ಉಳಿದಿವೆ. ಇದು ತಪ್ಪು ಹೀಗಾಗಬಾರದು. ಆದ್ದರಿಂದ ನಮ್ಮ ಸರ್ಕಾರ ಇನ್ನು ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚಿಸಲಾಗಿದೆ ಎಂದರು.

ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ. ಇಂದು ಎರಡು ವರ್ಷದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಹಳೆ ಸರ್ಕಾರದ ಅವಧಿಯ ಇನ್ನೆರಡು ವರ್ಷದ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ವೇದಿಕೆಯಲ್ಲೇ ಸೂಚನೆ ನೀಡಿದರು.

ಮೊದಲೆಲ್ಲಾ ಸಿನಿಮಾಗಳ ಸಂಖ್ಯೆ ಕಡಿಮೆ ಇತ್ತು. ನಾವು ನೋಡಿದ್ದನ್ನೇ ಮತ್ತೆ ಮತ್ತೆ ನೋಡುತ್ತಿದ್ದೆವು. ಈಗ ಸಿಕ್ಕಾಪಟ್ಟೆ ಸಿನಿಮಾಗಳು ಬರುತ್ತಿವೆ. ಆದರೆ, ಸಾಮಾಜಿಕ ಕಾಳಜಿ ಮತ್ತು ಗುಣಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಈಗ ಸಿನಿಮಾ ನೋಡುವುದನ್ನೇ ಕಡಿಮೆ ಮಾಡಿದ್ದೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

11 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

11 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

22 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

22 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

22 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

22 hours ago