cm siddaramiah
ಮೈಸೂರು : ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಇಂದಿರಾ ಗಾಂಧಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಭವನದ ನಿರ್ಮಾಣ ಕಾರ್ಯ ಒಂದು ವರ್ಷದಲ್ಲಿ ಮುಗಿಯಬೇಕು ಎಂದರು.
ಗ್ರಾಮೀಣ ಮತ್ತು ನಗರ ಜಿಲ್ಲೆಗಳಿಗೆ ಕಾಂಗ್ರೆಸ್ ಪಕ್ಷಕ್ಕೆ ಸ್ವಂತ ಕಟ್ಟಡ ಇರಲಿಲ್ಲ. ದೇವರಾಜ ಅರಸು ಅವರ ಕಾಲದಲ್ಲಿ ಈ ಭೂಮಿಯಲ್ಲಿ ನೀಡಲಾಗಿತ್ತು. ತಿವಾರಿಯವರು ಅವರು ಇದನ್ನು ಜೋಪಾನ ಮಾಡಿದ್ದು, ಕಾಂಗ್ರೆಸ್ ಭವನಕ್ಕೆ ಸಂಕುಸ್ಥಾಪನೆಯಾಗಿರುವುದು ಸಂತೋಷದ ವಿಷಯ ಎಂದರು.
ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು ಕಾಂಗ್ರೆಸ್ಸಿನ ಮುಖಂಡರು, ಕಾರ್ಯಕರ್ತರು, ಅಧ್ಯಕ್ಷರು, ಮಹಿಳೆಯರಿಗೆ, ಅನುಕೂಲವಾಗುವ ಭವ್ಯ ಕಾಂಗ್ರೆಸ್ ಭವನ ನಿರ್ಮಾಣವಾಗುತ್ತಿದೆ.ಇದಕ್ಕೆ ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಕಾರ್ಯಕರ್ತರ ವಂತಿಗೆ ಹಣದಿಂದಲೇ ಈ ಭವನ ನಿರ್ಮಾಣವಾಗುತ್ತಿದೆ. ಯತೀಂದ್ರ ಸಿದ್ದರಾಮಯ್ಯ ಅವರು ಕಟ್ಟಡ ಸಮಿತಿಗೆ ಸಂಚಾಲಕರಾಗಿದ್ದು, ಅಧ್ಯಕ್ಷರೂ ಸೇರಿದಂತೆ ಎಲ್ಲರೂ ಶ್ರಮ ಹಾಗೂ ಮುತುವರ್ಜಿ ವಹಿಸಿ ಕಟ್ಟಡವನ್ನು ಒಂದು ವರ್ಷದೊಳಗೆ ನಿರ್ಮಾಣವಾಗುವಂತೆ ವ್ಯವಸ್ಥೆ ಮಾಡಬೇಕು. ಕಾರ್ಯಕರ್ತರು ಕೂಡ ಎಲ್ಲ ರೀತಿಯ ಸಹಕಾರವನ್ನು ನೀಡಬೇಕು ಎಂದರು.
ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಭವನ ನಿರ್ಮಾಣವಾಗುತ್ತಿದೆ. ಇದು ಸಂತಷದ ವಿಷಯ ಎಂದರು. ಕಾಂಗ್ರೆಸ್ಸಿನ ಎಲ್ಲಾ ಮುಖಂಡರು ಶಕ್ತ್ಯಾನುಸಾರ ದೇಣಿಗೆ ನೀಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಮಾಜಿ ಶಾಸಕರ ತಂದೆ 5 ಲಕ್ಷ ದೇಣಿಗೆ ಮಾಜಿ ಶಾಸಕ ಮಂಜುನಾಥ್ ಅವರ ತಂದೆ ಪ್ರೇಮ್ ಕುಮಾರ್ ಅವರು ಐದು ಲಕ್ಷ ರೂಪಾಯಿಗಳ ದೇಣಿಗೆ ನೀಡಿದ್ದು, ಅವರಿಗೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸಿದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…