ಮೈಸೂರು

ಮೈಸೂರು | ಕಾಂಗ್ರೆಸ್‌ ಭವನ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿದ ಸಿಎಂ

ಮೈಸೂರು : ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಇಂದಿರಾ ಗಾಂಧಿ ಕಾಂಗ್ರೆಸ್‌ ಭವನ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಭವನದ ನಿರ್ಮಾಣ ಕಾರ್ಯ ಒಂದು ವರ್ಷದಲ್ಲಿ ಮುಗಿಯಬೇಕು ಎಂದರು.

ಗ್ರಾಮೀಣ ಮತ್ತು ನಗರ ಜಿಲ್ಲೆಗಳಿಗೆ ಕಾಂಗ್ರೆಸ್ ಪಕ್ಷಕ್ಕೆ ಸ್ವಂತ ಕಟ್ಟಡ ಇರಲಿಲ್ಲ. ದೇವರಾಜ ಅರಸು ಅವರ ಕಾಲದಲ್ಲಿ ಈ ಭೂಮಿಯಲ್ಲಿ ನೀಡಲಾಗಿತ್ತು. ತಿವಾರಿಯವರು ಅವರು ಇದನ್ನು ಜೋಪಾನ ಮಾಡಿದ್ದು, ಕಾಂಗ್ರೆಸ್ ಭವನಕ್ಕೆ ಸಂಕುಸ್ಥಾಪನೆಯಾಗಿರುವುದು ಸಂತೋಷದ ವಿಷಯ ಎಂದರು.

ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು ಕಾಂಗ್ರೆಸ್ಸಿನ ಮುಖಂಡರು, ಕಾರ್ಯಕರ್ತರು, ಅಧ್ಯಕ್ಷರು, ಮಹಿಳೆಯರಿಗೆ, ಅನುಕೂಲವಾಗುವ ಭವ್ಯ ಕಾಂಗ್ರೆಸ್ ಭವನ ನಿರ್ಮಾಣವಾಗುತ್ತಿದೆ.ಇದಕ್ಕೆ ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಕಾರ್ಯಕರ್ತರ ವಂತಿಗೆ ಹಣದಿಂದಲೇ ಈ ಭವನ ನಿರ್ಮಾಣವಾಗುತ್ತಿದೆ. ಯತೀಂದ್ರ ಸಿದ್ದರಾಮಯ್ಯ ಅವರು ಕಟ್ಟಡ ಸಮಿತಿಗೆ ಸಂಚಾಲಕರಾಗಿದ್ದು, ಅಧ್ಯಕ್ಷರೂ ಸೇರಿದಂತೆ ಎಲ್ಲರೂ ಶ್ರಮ ಹಾಗೂ ಮುತುವರ್ಜಿ ವಹಿಸಿ ಕಟ್ಟಡವನ್ನು ಒಂದು ವರ್ಷದೊಳಗೆ ನಿರ್ಮಾಣವಾಗುವಂತೆ ವ್ಯವಸ್ಥೆ ಮಾಡಬೇಕು. ಕಾರ್ಯಕರ್ತರು ಕೂಡ ಎಲ್ಲ ರೀತಿಯ ಸಹಕಾರವನ್ನು ನೀಡಬೇಕು ಎಂದರು.

ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಭವನ ನಿರ್ಮಾಣವಾಗುತ್ತಿದೆ. ಇದು ಸಂತಷದ ವಿಷಯ ಎಂದರು. ಕಾಂಗ್ರೆಸ್ಸಿನ ಎಲ್ಲಾ ಮುಖಂಡರು ಶಕ್ತ್ಯಾನುಸಾರ ದೇಣಿಗೆ ನೀಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಾಜಿ ಶಾಸಕರ ತಂದೆ 5 ಲಕ್ಷ ದೇಣಿಗೆ ಮಾಜಿ ಶಾಸಕ ಮಂಜುನಾಥ್ ಅವರ ತಂದೆ ಪ್ರೇಮ್ ಕುಮಾರ್ ಅವರು ಐದು ಲಕ್ಷ ರೂಪಾಯಿಗಳ ದೇಣಿಗೆ ನೀಡಿದ್ದು, ಅವರಿಗೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

5 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

7 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

21 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago