cm siddaramiah
ಮೈಸೂರು : ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಇಂದಿರಾ ಗಾಂಧಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಭವನದ ನಿರ್ಮಾಣ ಕಾರ್ಯ ಒಂದು ವರ್ಷದಲ್ಲಿ ಮುಗಿಯಬೇಕು ಎಂದರು.
ಗ್ರಾಮೀಣ ಮತ್ತು ನಗರ ಜಿಲ್ಲೆಗಳಿಗೆ ಕಾಂಗ್ರೆಸ್ ಪಕ್ಷಕ್ಕೆ ಸ್ವಂತ ಕಟ್ಟಡ ಇರಲಿಲ್ಲ. ದೇವರಾಜ ಅರಸು ಅವರ ಕಾಲದಲ್ಲಿ ಈ ಭೂಮಿಯಲ್ಲಿ ನೀಡಲಾಗಿತ್ತು. ತಿವಾರಿಯವರು ಅವರು ಇದನ್ನು ಜೋಪಾನ ಮಾಡಿದ್ದು, ಕಾಂಗ್ರೆಸ್ ಭವನಕ್ಕೆ ಸಂಕುಸ್ಥಾಪನೆಯಾಗಿರುವುದು ಸಂತೋಷದ ವಿಷಯ ಎಂದರು.
ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು ಕಾಂಗ್ರೆಸ್ಸಿನ ಮುಖಂಡರು, ಕಾರ್ಯಕರ್ತರು, ಅಧ್ಯಕ್ಷರು, ಮಹಿಳೆಯರಿಗೆ, ಅನುಕೂಲವಾಗುವ ಭವ್ಯ ಕಾಂಗ್ರೆಸ್ ಭವನ ನಿರ್ಮಾಣವಾಗುತ್ತಿದೆ.ಇದಕ್ಕೆ ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಕಾರ್ಯಕರ್ತರ ವಂತಿಗೆ ಹಣದಿಂದಲೇ ಈ ಭವನ ನಿರ್ಮಾಣವಾಗುತ್ತಿದೆ. ಯತೀಂದ್ರ ಸಿದ್ದರಾಮಯ್ಯ ಅವರು ಕಟ್ಟಡ ಸಮಿತಿಗೆ ಸಂಚಾಲಕರಾಗಿದ್ದು, ಅಧ್ಯಕ್ಷರೂ ಸೇರಿದಂತೆ ಎಲ್ಲರೂ ಶ್ರಮ ಹಾಗೂ ಮುತುವರ್ಜಿ ವಹಿಸಿ ಕಟ್ಟಡವನ್ನು ಒಂದು ವರ್ಷದೊಳಗೆ ನಿರ್ಮಾಣವಾಗುವಂತೆ ವ್ಯವಸ್ಥೆ ಮಾಡಬೇಕು. ಕಾರ್ಯಕರ್ತರು ಕೂಡ ಎಲ್ಲ ರೀತಿಯ ಸಹಕಾರವನ್ನು ನೀಡಬೇಕು ಎಂದರು.
ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಭವನ ನಿರ್ಮಾಣವಾಗುತ್ತಿದೆ. ಇದು ಸಂತಷದ ವಿಷಯ ಎಂದರು. ಕಾಂಗ್ರೆಸ್ಸಿನ ಎಲ್ಲಾ ಮುಖಂಡರು ಶಕ್ತ್ಯಾನುಸಾರ ದೇಣಿಗೆ ನೀಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಮಾಜಿ ಶಾಸಕರ ತಂದೆ 5 ಲಕ್ಷ ದೇಣಿಗೆ ಮಾಜಿ ಶಾಸಕ ಮಂಜುನಾಥ್ ಅವರ ತಂದೆ ಪ್ರೇಮ್ ಕುಮಾರ್ ಅವರು ಐದು ಲಕ್ಷ ರೂಪಾಯಿಗಳ ದೇಣಿಗೆ ನೀಡಿದ್ದು, ಅವರಿಗೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸಿದರು.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…