ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ಸಿಎಂ ಸಿದ್ದರಾಮಯ್ಯ ಕನಸಿನ ಮನೆ ತಲೆ ಎತ್ತುತ್ತಿದ್ದು, ಪ್ರಗತಿಯಲ್ಲಿರುವ ಅಂತಿಮ ಹಂತದ ಕಾಮಗಾರಿಗೆ ತಲುಪಿದೆ.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸಂಧ್ಯಾ ಕಾಲದಲ್ಲಿ ಸ್ವಂತ ಮನೆಯೊಂದನ್ನು ಕುವೆಂಪುನಗರದ ಜೋಡಿ ರಸ್ತೆಯಲ್ಲಿ ನಿರ್ಮಾಣ ಮಾಡಿಕೊಳ್ಳುತ್ತಿದ್ದು, ಇನ್ನೆರಡು ಮೂರು ತಿಂಗಳಲ್ಲಿ ಗೃಹ ಪ್ರವೇಶಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.
ಕುವೆಂಪುನಗದಲ್ಲಿರುವ ನಿರ್ಮಾಣವಾಗುತ್ತಿರುವ ಮನೆ ದೊಡ್ಡ ಬಂಗಲೆಯಾಗಿದೆ. ಅಲ್ಲದೇ ಸಿದ್ದರಾಮಯ್ಯ ಅವರ ಮನೆಯ ಸುತ್ತ-ಮುತ್ತ ಸುಮಾರು ನೂರು ಮೀಟರ್ವರೆಗೂ ಬೀದಿ-ಬದಿ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ.
ಈ ಮನೆಯೂ ನೆಲ ಮಹಡಿ ಸೇರಿದಂತೆ ಮೂರು ಹಂತಸ್ತಿನ ಬೃಹತ್ ಕಟ್ಟಡವಾಗಿದ್ದು, ನೂತನ ಮನೆಗೆ ಅಂತಿಮ ಹಂತದ ಸ್ಪರ್ಶ ನಡೆಯುತ್ತಿದೆ. ಅಲ್ಲದೇ ಮನೆಯೊಳಗೆ ನಡೆಯುತ್ತಿರುವ ಸುಣ್ಣ, ಬಣ್ಣ ಹಾಗೂ ಇಂಟಿರಿಯರ್ ಡೆಕೋರೇಟ್ ಕೆಲಸವೂ ಸಾಗುತ್ತಿದೆ. ಹೀಗಾಗಿ ಈ ವರ್ಷದ ಜೂನ್ ಅಥವಾ ಜುಲೈ
ತಿಂಗಳಲ್ಲಿ ಮನೆಯ ಗೃಹಪ್ರವೇಶ ಸಾಧ್ಯತೆ ಎನ್ನಲಾಗಿದೆ.
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…