ಮೈಸೂರು: ರಾಜ್ಯ ಕಂಡ ಅಪ್ರತಿಮ ದಲಿತ ನಾಯಕ, ನೇರ ನಿಷ್ಠೂರವಾದಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಮೈಸೂರಿನ ನಿವಾಸಕ್ಕೆ ಇಂದು ಸಿಎಂ ಸಿದ್ದರಾಮಯ್ಯ ತೆರಳಿ ಅಂತಿಮ ದರ್ಶನ ಪಡೆದರು.
ಇನ್ನು ಪ್ರಸಾದ್ ಅವರ ಅಂತಿಮ ದರ್ಶನ ಪಡೆದ ಸಿಎಂ ಬಳಿಕ ಅವರ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಚುನಾವಣೆಗೆ ಕೆಲವು ದಿನಗಳು ಇರುವಂತೆಯೇ ಸತತ 7 ವರ್ಷಗಳಿಂದ ಮುನಿಸಿಕೊಂಡಿದ್ದ ಪ್ರಸಾದ್ ಹಾಗೂ ಸಿದ್ದರಾಮಯ್ಯ ಮತ್ತೆ ಒಂದಾದರು. ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಪ್ರಸಾದ್ ಅವರಿಗೆ ಹೆಚ್ಚಿನ ಬೆಂಬಲವಿದ್ದು, ಅವರ ಸಹಾಯಕ್ಕಾಗಿ ಸಿಎಂ ಬಂದಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಪ್ರಸಾದ್ ಅವರ ಆರೋಗ್ಯ ವಿಚಾರಿಸಲು ತಾವು ಬಂದಿರುವುದಾಗಿ ಸಿಎಂ ಸಿದ್ದರಾಮಯ್ಯ ತಮ್ಮ ಹಳೆಯ ದೋಸ್ತಿಯನ್ನು ನೆನೆದರು. ಇದಾದ ಸ್ವಲ್ಪ ದಿನಗಳ ನಂತರ ತೀವ್ರ ಅನಾರೋಗ್ಯಕ್ಕೆ ತುತ್ತಾದ ಪ್ರಸಾದ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.
ವಯೋ ಸಹಜ ಕಾಯಿಲೆ, ಬಹು ಅಂಗಾಂಗ ವೈಫಲ್ಯದಿಂದ ವಿ. ಶ್ರೀನವಾಸ್ ಪ್ರಸಾದ್ ಅವರು ಇಂದು ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಬಳಿಕ ಅವರನ್ನು ಮೈಸೂರಿನ ಅವರ ನಿವಾಸಕ್ಕೆ ಕರೆತರಲಾಯಿತು.
ನಂತರ ಅವರ ಅಭಿಮಾನಿಗಳ ದರ್ಶನಕ್ಕಾಗಿ ಅಶೋಕಪುರಂ ನ ಎಂಟಿಎಂ ಶಾಲೆಗೆ ಪಾರ್ಥಿವ ಶರೀರವನ್ನು ರವಾನಿಸಲಾಗಿದ್ದು, ನಾಳೆ (ಏ.30) ಮದ್ಯಾಹ್ನ ಬೌದ್ಧ ಧರ್ಮದ ವಿಧಿ ವಿಧಾನದ ಮೂಲಕ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಪುತ್ರಿ ಮಾಹಿತಿ ನೀಡಿದ್ದಾರೆ.
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…
ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…
ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…
ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…
೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…