ಮೈಸೂರು

ವಾಲ್ಮೀಕಿ ಹಗರಣದಲ್ಲಿ ನನ್ನನ್ನು ಸಿಕ್ಕಿಸಲು ಹೋಗಿ ಸೋತು ಈಗ ಮುಡಾ ನೆಪ ಹೇಳುತ್ತಿದ್ದಾರೆ: ಸಿಎಂ

ಮೈಸೂರು: ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಹೇಳಿದರು.

ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು SIT ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು SIT ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ SIT ಯವರು ತನಿಖೆ ನಡೆಸಿದ್ದಾರೆ. ಆದರೂ ED ಯವರು ಸ್ವಯಂಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ ಎಂದು ಕರೆ ನೀಡಿದರು.

ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ? ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ ಎಂದರು.

ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ ಎಂದು ಪ್ರಶ್ನಿಸಿದರು.

15 ಬಜೆಟ್ ಮಂಡಿಸಿದವನು ನಾನು. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮಬೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ ಎಂದರು.

ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.

ಹೇಳಿ, ಇದರಲ್ಲಿ ನನ್ನ ತಪ್ಪು ಎಲ್ಲಿದೆ? ಮುಡಾದ ಯಾವ ಸದಸ್ಯರಿಗೂ ನಾನು ಕರೆ ಮಾಡಿಲ್ಲ, ಬೇಡಿಕೆ ಇಟ್ಟಿಲ್ಲ, ಶಿಫಾರಸ್ಸು ಮಾಡಿಲ್ಲ. ನಾನು ಯಾವುದಕ್ಕೂ ಸಹಿ ಹಾಕಿಲ್ಲ. ಹೀಗಿದ್ದಾಗ ಇದರಲ್ಲಿ ನನ್ನ ಪಾತ್ರ ಏನು ಹೇಳಿ? ನಾನು ತಪ್ಪು ಮಾಡಿದ್ದೀನಾ ಹೇಳಿ ಎಂದು ಪ್ರಶ್ನಿಸಿದರು.

ನಮ್ಮ ಜಮೀನು ಪಡೆದು ಸೈಟು, ಪಾರ್ಕು ಮಾಡಿ, ರಸ್ತೆ ಮಾಡಿ ಹಂಚಿಬಿಟ್ಟರು. ಇಲ್ಲಿ ತಪ್ಪು ಮಾಡಿರುವುದು ಮೂಡಾ ಎನ್ನುತ್ತಾ ಮುಡಾ ಸೈಟು ಹಂಚಿಕೆಯಲ್ಲಿ ಮೂಡಾ ಮಾಡಿರುವ ಲೋಪಗಳನ್ನು ವಿವರಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

5 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

15 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

34 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

57 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago