ಮೈಸೂರು: ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಹೇಳಿದರು.
ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು SIT ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು SIT ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ SIT ಯವರು ತನಿಖೆ ನಡೆಸಿದ್ದಾರೆ. ಆದರೂ ED ಯವರು ಸ್ವಯಂಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ ಎಂದು ಕರೆ ನೀಡಿದರು.
ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ? ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ ಎಂದರು.
ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ ಎಂದು ಪ್ರಶ್ನಿಸಿದರು.
15 ಬಜೆಟ್ ಮಂಡಿಸಿದವನು ನಾನು. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮಬೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.
ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ ಎಂದರು.
ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.
ಹೇಳಿ, ಇದರಲ್ಲಿ ನನ್ನ ತಪ್ಪು ಎಲ್ಲಿದೆ? ಮುಡಾದ ಯಾವ ಸದಸ್ಯರಿಗೂ ನಾನು ಕರೆ ಮಾಡಿಲ್ಲ, ಬೇಡಿಕೆ ಇಟ್ಟಿಲ್ಲ, ಶಿಫಾರಸ್ಸು ಮಾಡಿಲ್ಲ. ನಾನು ಯಾವುದಕ್ಕೂ ಸಹಿ ಹಾಕಿಲ್ಲ. ಹೀಗಿದ್ದಾಗ ಇದರಲ್ಲಿ ನನ್ನ ಪಾತ್ರ ಏನು ಹೇಳಿ? ನಾನು ತಪ್ಪು ಮಾಡಿದ್ದೀನಾ ಹೇಳಿ ಎಂದು ಪ್ರಶ್ನಿಸಿದರು.
ನಮ್ಮ ಜಮೀನು ಪಡೆದು ಸೈಟು, ಪಾರ್ಕು ಮಾಡಿ, ರಸ್ತೆ ಮಾಡಿ ಹಂಚಿಬಿಟ್ಟರು. ಇಲ್ಲಿ ತಪ್ಪು ಮಾಡಿರುವುದು ಮೂಡಾ ಎನ್ನುತ್ತಾ ಮುಡಾ ಸೈಟು ಹಂಚಿಕೆಯಲ್ಲಿ ಮೂಡಾ ಮಾಡಿರುವ ಲೋಪಗಳನ್ನು ವಿವರಿಸಿದರು.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…