Mysore
23
overcast clouds
Light
Dark

ಮೈಸೂರು: ಕಾಯಕಯೋಗಿಗೆ ಗೌರವ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಕಾಯಕಯೋಗಿ ಬಸವ ಜಯಂತಿ ಪ್ರಯುಕ್ತ ಮೈಸೂರು ನಗರದ ಗನ್ ಹೌಸ್ ಬಳಿಯಿರುವ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದ್ದಾರೆ.

ಇವರಿಗೆ ಜೊತೆಯಾಗಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಸಚಿವ ಎಚ್.ಸಿ.ಮಹದೇವಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಶಾಸಕರಾದ ಹರೀಶ್ ಗೌಡ, ಎ.ಆರ್‌ ಕೃಷ್ಣಮೂರ್ತಿ ಸೇರಿ ಹಲವರು ಉಪಸ್ಥಿತರಿದ್ದರು.