ಮೈಸೂರು: ರಾಜ್ಯದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮಿತಿಯಲ್ಲೇ ದಾಖಲೆಯ 17ನೇ ಬಜೆಟ್ ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರು ತಾಲ್ಲೂಕಿನ ಪಿಲ್ಲಹಳ್ಳಿ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಲ್ಲುವ ಮುನ್ನ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳ ಟೀಕೆಗೆ ಉತ್ತರಿಸಿದರು. ಕರ್ನಾಟಕದ ಸಾಲದ ಪ್ರಮಾಣವು ನಿಗದಿತ ಶೇಕಡಾ 25ರ ಮಿತಿಯೊಳಗೇ ಅಂದರೆ ಶೇಕಡಾ 24.94ರಷ್ಟಿದೆ. ಆದರೆ ಕೇಂದ್ರ ಸರ್ಕಾರದ ಸಾಲದ ಪ್ರಮಾಣವು ಶೇಕಡಾ 55.6ಕ್ಕೆ ಏರಿಕೆಯಾಗಿದ್ದು, ಇದು ಆತಂಕಕಾರಿ ಸಂಗತಿಯಾಗಿದೆ ಎಂದು ಅವರು ದೂರಿದರು.
ಕಳೆದ 11 ವರ್ಷಗಳಲ್ಲಿ ಕೇಂದ್ರದ ಸಾಲ 53 ಲಕ್ಷ ಕೋಟಿಯಿಂದ 218 ಲಕ್ಷ ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ ಎಂದು ಅಂಕಿ ಅಂಶ ನೀಡಿದ ಮುಖ್ಯಮಂತ್ರಿಗಳು, ಜಿಎಸ್ಟಿ ತಿದ್ದುಪಡಿಯಿಂದ ರಾಜ್ಯಕ್ಕೆ ವಾರ್ಷಿಕ ಸುಮಾರು 10,000 ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಎಲ್ಲಾ ಹಿನ್ನಡೆಯ ನಡುವೆಯೂ ಜನಸಾಮಾನ್ಯರ ಮೇಲೆ ಹೊಸ ತೆರಿಗೆ ಹೇರದೆ, ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದರು.
ನಮ್ಮದು ಒಂದು ವರ್ಗಕ್ಕೆ ಸೀಮಿತವಾದ ಬಜೆಟ್ ಅಲ್ಲ, ಸಾಮಾಜಿಕ ನ್ಯಾಯದಡಿ ಸಮಾನ ಅವಕಾಶ ಒದಗಿಸುವ ಕೆಲಸ ಮಾಡಿದ್ದೇವೆ, ಯಾವುದೇ ಒಂದು ವರ್ಗ ಅಥವಾ ಕೆಲವೇ ವರ್ಗಕ್ಕೆ ಬಜೆಟ್ ಮಂಡಿಸಿಲ್ಲ ಬದಲಾಗಿ ಎಲ್ಲಾ ವರ್ಗಕ್ಕೂ ಅನುಕೂಲವಾಗುವ ರೀತಿಯಲ್ಲಿ ಬಜೆಟ್ ಮಂಡನೆ ಮಾಡಲಾಗಿದೆ ಎಂದರು.
ಪಕ್ಷದ ಹೈಕಮಾಂಡ್ ತೀರ್ಮಾನಿಸಿದರೆ ಮುಂದಿನ ದಿನಗಳಲ್ಲಿ ಇನ್ನೂ ಎರಡು ಬಜೆಟ್ ಮಂಡಿಸಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದಾಗಿ ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ವಿಧಾನಪರಿಷತ್ ಸದಸ್ಯರಾದ ಡಾ ಡಿ ತಿಮ್ಮಯ್ಯ, ಡಾ ಕೆ ಶಿವಕುಮಾರ್, ಡಾ ಯತಿಂದ್ರ ಸಿದ್ದರಾಮಯ್ಯ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…