ಮೈಸೂರು: ಸಿಬಿಐ ಕೋರ್ಟಗೆ ಸಲ್ಲಿಸಿದ ದೂರಿನಲ್ಲಿ ಅಮಿತ್ ಶಾ ಅವರನ್ನು ಗೂಂಡಾ ಎಂದು ನಮೂದಿಸಿತ್ತು. ಆ ವರದಿಯನ್ನು ಆಧಾರವನ್ನಾಗಿಟ್ಟುಕೊಂಡು ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅಮಿತ್ ಶಾ ಅವರನ್ನು ಅವಮಾಣಿಸಬೇಕೆಂಬ ಉದ್ದೇಶದಿಂದಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಹೇಳಿದ್ದಾರೆ.
ಇನ್ನು ರಾಜ್ಯದ ಹಿರಿಯ ರಾಜಕಾರಣಿ ಮತ್ತು ಹಾಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ರನ್ನು ತಾವು ಭೇಟಿಯಾಗಿಲ್ಲ, ಫೋನಲ್ಲೂ ತಾನು ಅವರೊಂದಿಗೆ ಮಾತಾಡಿಲ್ಲ. ಆದರೆ, ಸಚಿವರಾದ ಎಚ್.ಸಿ ಮಹದೇವಪ್ಪ ಮತ್ತು ಕೆ.ವೆಂಕಟೇಶ್ ಭೇಟಿಯಾಗಿದ್ದು, ಅವರು ಏನು ಭರವಸೆ ನೀಡಿದ್ದಾರೆ ಎಂಬ ಬಗ್ಗೆ ಅವರಿಬ್ಬರನ್ನೇ ಕೇಳಬೇಕು ಎಂದು ತಿಳಿಸಿದರು.