Siddaramaiah. Photo: PTI
ಮೈಸೂರು: ತಾವು ಪ್ರಾಥಾಮಿಕ ಶಿಕ್ಷಣ ಪಡೆದ ಕುಪ್ಪೇಗಾಲ ಮತ್ತು ಸಿದ್ದರಾಮನಹುಂಡಿ ಸರ್ಕಾರಿ ಶಾಲೆಗಳಿಗೆ ವಯಕ್ತಿಕವಾಗಿ ತಲಾ 10 ಲಕ್ಷ ರೂ ಗಳನ್ನು ದೇಣಿಗೆಯಾಗಿ ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.
ರಾಜ್ಯ ಸರ್ಕಾರವು ಶಾಲೆಗಳ ಅಭಿವೃದ್ಧಿಗೆ ‘ನನ್ನ ಶಾಲೆ, ನನ್ನ ಜವಾಬ್ದಾರಿ’ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಶಾಲೆಗಳಲ್ಲಿ ಓದಿದ ಹಳೆ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ಧಿಯ ಜವಾಬ್ದಾರಿಯನ್ನು ನೀಡಲಾಗುತ್ತಿದ್ದು, ಯೋಜನೆಯ ಆರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಾವು ಓದಿದ ಶಾಲೆಗಳಿಗೆ ದೇಣಿಗೆ ನೀಡಿದ್ದು, ಮಾರ್ಚ್ 7ರಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ.
ಹತ್ತನೇ ವರ್ಷದವರೆಗೂ ಸಿದ್ದರಾಮಯ್ಯ ಶಾಲೆಗೆ ಹೋಗಿರಲಿಲ್ಲ. ಸಿದ್ದರಾಮನಹುಂಡಿಯಿಂದ 1.5 ಕಿ.ಮೀ ದೂರವಿರುವ ಕುಪ್ಪೆಗಾಲ ಶಾಲೆಗೆ 5ನೇ ತರಗತಿಗೆ ನೇರವಾಗಿ ಪ್ರವೇಶ ಪಡೆದ ಅವರು, 7 ತರಗತಿವರೆಗೂ ಇಲ್ಲಿಯೇ ಶಿಕ್ಷಣ ಪಡೆದಿದ್ದರು’ ಎಂದು ತಿಳಿಸಿದರು.
2015-16ರಲ್ಲಿ ಶಾಲೆಗೆ 1 ಎಕರೆ ಜಾಗದಲ್ಲಿ 8 ಕೊಠಡಿ, 2 ಶೌಚಾಲಯ ಹಾಗೂ ಕಾಂಪೌಂಡ್ ಸೇರಿದಂತೆ ಹೊಸ ಕಟ್ಟಡ ಕಟ್ಟಿಸಿಕೊಟ್ಟು ಉನ್ನತೀಕರಿಸಿದ್ದರು, ಇದೀಗ 10 ಲಕ್ಷ ವೈಯಕ್ತಿಕ ನೆರವು ನೀಡುತ್ತಿದ್ದಾರೆ’ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಹೇಳಿದರು.
ಈ ನೀಡಿರುವ ನೆರವಿನಿಂದ ಸ್ಮಾರ್ಟ್ ಕ್ಲಾಸ್ಗಳನ್ನು ನಡೆಸಲು ಅನುಕೂಲವಾಗುವಂತೆ ಸ್ಮಾರ್ಟ್ ಟಿವಿ, ಪ್ರೊಜೆಕ್ಟರ್ ತರಲಾಗುವುದು ಎಂದರು.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…