Siddaramaiah. Photo: PTI
ಮೈಸೂರು: ತಾವು ಪ್ರಾಥಾಮಿಕ ಶಿಕ್ಷಣ ಪಡೆದ ಕುಪ್ಪೇಗಾಲ ಮತ್ತು ಸಿದ್ದರಾಮನಹುಂಡಿ ಸರ್ಕಾರಿ ಶಾಲೆಗಳಿಗೆ ವಯಕ್ತಿಕವಾಗಿ ತಲಾ 10 ಲಕ್ಷ ರೂ ಗಳನ್ನು ದೇಣಿಗೆಯಾಗಿ ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.
ರಾಜ್ಯ ಸರ್ಕಾರವು ಶಾಲೆಗಳ ಅಭಿವೃದ್ಧಿಗೆ ‘ನನ್ನ ಶಾಲೆ, ನನ್ನ ಜವಾಬ್ದಾರಿ’ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಶಾಲೆಗಳಲ್ಲಿ ಓದಿದ ಹಳೆ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ಧಿಯ ಜವಾಬ್ದಾರಿಯನ್ನು ನೀಡಲಾಗುತ್ತಿದ್ದು, ಯೋಜನೆಯ ಆರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಾವು ಓದಿದ ಶಾಲೆಗಳಿಗೆ ದೇಣಿಗೆ ನೀಡಿದ್ದು, ಮಾರ್ಚ್ 7ರಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ.
ಹತ್ತನೇ ವರ್ಷದವರೆಗೂ ಸಿದ್ದರಾಮಯ್ಯ ಶಾಲೆಗೆ ಹೋಗಿರಲಿಲ್ಲ. ಸಿದ್ದರಾಮನಹುಂಡಿಯಿಂದ 1.5 ಕಿ.ಮೀ ದೂರವಿರುವ ಕುಪ್ಪೆಗಾಲ ಶಾಲೆಗೆ 5ನೇ ತರಗತಿಗೆ ನೇರವಾಗಿ ಪ್ರವೇಶ ಪಡೆದ ಅವರು, 7 ತರಗತಿವರೆಗೂ ಇಲ್ಲಿಯೇ ಶಿಕ್ಷಣ ಪಡೆದಿದ್ದರು’ ಎಂದು ತಿಳಿಸಿದರು.
2015-16ರಲ್ಲಿ ಶಾಲೆಗೆ 1 ಎಕರೆ ಜಾಗದಲ್ಲಿ 8 ಕೊಠಡಿ, 2 ಶೌಚಾಲಯ ಹಾಗೂ ಕಾಂಪೌಂಡ್ ಸೇರಿದಂತೆ ಹೊಸ ಕಟ್ಟಡ ಕಟ್ಟಿಸಿಕೊಟ್ಟು ಉನ್ನತೀಕರಿಸಿದ್ದರು, ಇದೀಗ 10 ಲಕ್ಷ ವೈಯಕ್ತಿಕ ನೆರವು ನೀಡುತ್ತಿದ್ದಾರೆ’ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಹೇಳಿದರು.
ಈ ನೀಡಿರುವ ನೆರವಿನಿಂದ ಸ್ಮಾರ್ಟ್ ಕ್ಲಾಸ್ಗಳನ್ನು ನಡೆಸಲು ಅನುಕೂಲವಾಗುವಂತೆ ಸ್ಮಾರ್ಟ್ ಟಿವಿ, ಪ್ರೊಜೆಕ್ಟರ್ ತರಲಾಗುವುದು ಎಂದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…