ಮೈಸೂರು: ಸಾಮಾಜಿಕ ಚಿಂತಕ ಹಾಗೂ ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್ ಚಂದ್ರಗುರು(68) ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಸಂತಾಪ ಸೂಚಿಸಿರುವ ಅವರು, ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು ಅವರು ತರಗತಿಗಳಿಂದ ಹೊರಗೆ ಕೂಡಾ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು. ಬುದ್ದ, ಬಸವ, ಅಂಬೇಡ್ಕರ್ ಚಿಂತನೆಗಳಿಂದ ಪ್ರಭಾವಿತರಾಗಿದ್ದ ಡಾ.ಮಹೇಶ್ ಚಂದ್ರ ಗುರು ಎಂದೂ ಮೌನಕ್ಕೆ ಮೊರೆಹೋಗದೆ ಮತ್ತು ಪರಿಣಾಮವನ್ನೂ ಲೆಕ್ಕಿಸದೆ ನೇರವಾಗಿ ಮತ್ತು ನಿಷ್ಠುರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು.
ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…