ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಮೇ.24) ಬೆಳಿಗ್ಗೆ ನಗರದ ನಜರ್ಬಾದ್ನಲ್ಲಿರುವ ಮೈಲಾರಿ ಹೋಟೆಲ್ನಲ್ಲಿ ತಿಂಡಿ ಸವಿದು, ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೊಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ. ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು. ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು ಎಂದು ಬರೆದುಕೊಂಡಿದ್ದಾರೆ.
ಹೋಟೆಲ್ನಲ್ಲಿ ಅವರಿಗಿಷ್ಟವಾದ ಇಡ್ಲಿ, ದೋಸೆ ಯನ್ನು ಸವಿದಿದ್ದಾರೆ. ಈ ವೇಳೆ ಸಚಿವರಾದ ಎಚ್.ಸಿ ಮಹದೇವಪ್ಪ, ಕೆ.ಮಹದೇವ ಹಾಗೂ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಇದ್ದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…