ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಮೇ.24) ಬೆಳಿಗ್ಗೆ ನಗರದ ನಜರ್ಬಾದ್ನಲ್ಲಿರುವ ಮೈಲಾರಿ ಹೋಟೆಲ್ನಲ್ಲಿ ತಿಂಡಿ ಸವಿದು, ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೊಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ. ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು. ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು ಎಂದು ಬರೆದುಕೊಂಡಿದ್ದಾರೆ.
ಹೋಟೆಲ್ನಲ್ಲಿ ಅವರಿಗಿಷ್ಟವಾದ ಇಡ್ಲಿ, ದೋಸೆ ಯನ್ನು ಸವಿದಿದ್ದಾರೆ. ಈ ವೇಳೆ ಸಚಿವರಾದ ಎಚ್.ಸಿ ಮಹದೇವಪ್ಪ, ಕೆ.ಮಹದೇವ ಹಾಗೂ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಇದ್ದರು.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…