ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜನೆಯಾಗಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮ ಮುಗಿಸಿ ವಾಪಾಸ್ ಬೆಂಗಳೂರಿಗೆ ಮರಳುವ ವೇಳೆ ಮದ್ದೂರಿನಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮದ್ದೂರು ಟಿಫಾನೀಸ್ ಮಾಲೀಕ ರಾಮಕೃಷ್ಣ ಅವರು ನೀಡಿದ ಮದ್ದೂರು ವಡೆಯನ್ನು ಕಾರಿನಲ್ಲೇ ಕುಳಿತು ಸವಿದರು.
ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಶ್ರೀನಿವಾಸ ಪ್ರಸಾದ್ ನಿಧನದಿಂದ ಹಳೆ ತಲೆಮಾರಿನ ರಾಜಕಾರಣಿಗಳ ಕೊಂಡಿ ಕಳಚಿಹೋಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಪ್ರಸಾದ್ ಅವರು ಮನುಷ್ಯತ್ವದ ಬಗ್ಗೆ ಗೌರವ ಇಟ್ಟಿದ್ದರು. ಹೀಗಾಗಿ ಯಾವುದೇ ಪಕ್ಷದಲ್ಲಿದ್ದರೂ ಮನುಷ್ಯತ್ವಕ್ಕೆ ಗೌರವ ನೀಡುತ್ತಿದ್ದರು ಎಂದರು.
ಯಾರಿಗೆಲ್ಲಾ ರಾಜಕಾರಣದಲ್ಲಿ ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ಅವರ ಬಗ್ಗೆ ಕ್ಲ್ಯಾರಿಟಿ ಇರುತ್ತದೆ ಅವರೆಲ್ಲರಿಗೂ ಮನುಷ್ಯತ್ವದ ಪರವಾಗಿ ಇರಲು ಸಾಧ್ಯ. ಶ್ರೀನಿವಾಸ ಪ್ರಸಾದ್ ಅವರಿಗೆ ಆ ಕ್ಲ್ಯಾರಿಟಿ ಇತ್ತು ಎಂದು ತಿಳಿಸಿದರು.
ರಾಜಕೀಯದಲ್ಲಿದ್ದಾಗ ಪರಸ್ಪರ ಟೀಕೆ ಮಾಡುವುದು ಸ್ವಾಭಾವಿಕ. ಶ್ರೀನಿವಾಸ ಪ್ರಸಾದ್ ಅವರು ನನ್ನನ್ನು ಅನೇಕ ಬಾರಿ ಟೀಕೆ ಮಾಡಿದ್ದಾರೆ. ನಾನೂ ಅನೇಕ ಬಾರಿ ಅವರ ಬಗ್ಗೆ ಮಾತನಾಡಿದ್ದೇನೆ. ಆದರೆ ನಮ್ಮಿಬ್ಬರ ಸ್ನೇಹಕ್ಕೆ ಎಂದಿಗೂ ಧಕ್ಕೆ ಬಂದಿರಲಿಲ್ಲ ಎಂದರು.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…