ಮೈಸೂರು

ಮದ್ದೂರು ವಡೆ ಸವಿದ ಸಿಎಂ ಸಿದ್ದರಾಮಯ್ಯ

ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜನೆಯಾಗಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮ ಮುಗಿಸಿ ವಾಪಾಸ್ ಬೆಂಗಳೂರಿಗೆ ಮರಳುವ ವೇಳೆ ಮದ್ದೂರಿನಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮದ್ದೂರು ಟಿಫಾನೀಸ್ ಮಾಲೀಕ ರಾಮಕೃಷ್ಣ ಅವರು ನೀಡಿದ ಮದ್ದೂರು ವಡೆಯನ್ನು ಕಾರಿನಲ್ಲೇ ಕುಳಿತು ಸವಿದರು.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಶ್ರೀನಿವಾಸ ಪ್ರಸಾದ್‌ ನಿಧನದಿಂದ ಹಳೆ ತಲೆಮಾರಿನ ರಾಜಕಾರಣಿಗಳ ಕೊಂಡಿ ಕಳಚಿಹೋಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಪ್ರಸಾದ್‌ ಅವರು ಮನುಷ್ಯತ್ವದ ಬಗ್ಗೆ ಗೌರವ ಇಟ್ಟಿದ್ದರು. ಹೀಗಾಗಿ ಯಾವುದೇ ಪಕ್ಷದಲ್ಲಿದ್ದರೂ ಮನುಷ್ಯತ್ವಕ್ಕೆ ಗೌರವ ನೀಡುತ್ತಿದ್ದರು ಎಂದರು.

ಯಾರಿಗೆಲ್ಲಾ ರಾಜಕಾರಣದಲ್ಲಿ ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್‌ ಅವರ ಬಗ್ಗೆ ಕ್ಲ್ಯಾರಿಟಿ ಇರುತ್ತದೆ ಅವರೆಲ್ಲರಿಗೂ ಮನುಷ್ಯತ್ವದ ಪರವಾಗಿ ಇರಲು ಸಾಧ್ಯ. ಶ್ರೀನಿವಾಸ ಪ್ರಸಾದ್‌ ಅವರಿಗೆ ಆ ಕ್ಲ್ಯಾರಿಟಿ ಇತ್ತು ಎಂದು ತಿಳಿಸಿದರು.

ರಾಜಕೀಯದಲ್ಲಿದ್ದಾಗ ಪರಸ್ಪರ ಟೀಕೆ ಮಾಡುವುದು ಸ್ವಾಭಾವಿಕ. ಶ್ರೀನಿವಾಸ ಪ್ರಸಾದ್‌ ಅವರು ನನ್ನನ್ನು ಅನೇಕ ಬಾರಿ ಟೀಕೆ ಮಾಡಿದ್ದಾರೆ. ನಾನೂ ಅನೇಕ ಬಾರಿ ಅವರ ಬಗ್ಗೆ ಮಾತನಾಡಿದ್ದೇನೆ. ಆದರೆ ನಮ್ಮಿಬ್ಬರ ಸ್ನೇಹಕ್ಕೆ ಎಂದಿಗೂ ಧಕ್ಕೆ ಬಂದಿರಲಿಲ್ಲ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

10 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

12 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

13 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

13 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

14 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

16 hours ago