ಮೈಸೂರು

ಮದ್ದೂರು ವಡೆ ಸವಿದ ಸಿಎಂ ಸಿದ್ದರಾಮಯ್ಯ

ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜನೆಯಾಗಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮ ಮುಗಿಸಿ ವಾಪಾಸ್ ಬೆಂಗಳೂರಿಗೆ ಮರಳುವ ವೇಳೆ ಮದ್ದೂರಿನಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮದ್ದೂರು ಟಿಫಾನೀಸ್ ಮಾಲೀಕ ರಾಮಕೃಷ್ಣ ಅವರು ನೀಡಿದ ಮದ್ದೂರು ವಡೆಯನ್ನು ಕಾರಿನಲ್ಲೇ ಕುಳಿತು ಸವಿದರು.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಶ್ರೀನಿವಾಸ ಪ್ರಸಾದ್‌ ನಿಧನದಿಂದ ಹಳೆ ತಲೆಮಾರಿನ ರಾಜಕಾರಣಿಗಳ ಕೊಂಡಿ ಕಳಚಿಹೋಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಪ್ರಸಾದ್‌ ಅವರು ಮನುಷ್ಯತ್ವದ ಬಗ್ಗೆ ಗೌರವ ಇಟ್ಟಿದ್ದರು. ಹೀಗಾಗಿ ಯಾವುದೇ ಪಕ್ಷದಲ್ಲಿದ್ದರೂ ಮನುಷ್ಯತ್ವಕ್ಕೆ ಗೌರವ ನೀಡುತ್ತಿದ್ದರು ಎಂದರು.

ಯಾರಿಗೆಲ್ಲಾ ರಾಜಕಾರಣದಲ್ಲಿ ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್‌ ಅವರ ಬಗ್ಗೆ ಕ್ಲ್ಯಾರಿಟಿ ಇರುತ್ತದೆ ಅವರೆಲ್ಲರಿಗೂ ಮನುಷ್ಯತ್ವದ ಪರವಾಗಿ ಇರಲು ಸಾಧ್ಯ. ಶ್ರೀನಿವಾಸ ಪ್ರಸಾದ್‌ ಅವರಿಗೆ ಆ ಕ್ಲ್ಯಾರಿಟಿ ಇತ್ತು ಎಂದು ತಿಳಿಸಿದರು.

ರಾಜಕೀಯದಲ್ಲಿದ್ದಾಗ ಪರಸ್ಪರ ಟೀಕೆ ಮಾಡುವುದು ಸ್ವಾಭಾವಿಕ. ಶ್ರೀನಿವಾಸ ಪ್ರಸಾದ್‌ ಅವರು ನನ್ನನ್ನು ಅನೇಕ ಬಾರಿ ಟೀಕೆ ಮಾಡಿದ್ದಾರೆ. ನಾನೂ ಅನೇಕ ಬಾರಿ ಅವರ ಬಗ್ಗೆ ಮಾತನಾಡಿದ್ದೇನೆ. ಆದರೆ ನಮ್ಮಿಬ್ಬರ ಸ್ನೇಹಕ್ಕೆ ಎಂದಿಗೂ ಧಕ್ಕೆ ಬಂದಿರಲಿಲ್ಲ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

50 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

52 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

53 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

55 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

60 mins ago