Mysore
27
few clouds

Social Media

ಭಾನುವಾರ, 22 ಫೆಬ್ರವರಿ 2026
Light
Dark

ಸಾರ್ವಜನಿಕ ಅಹವಾಲು ಆಲಿಸಿದ ಸಿಎಂ

ಮೈಸೂರು: ಕಾಲು ನೋವಿನಿಂದ ವಿಶ್ರಾಂತಿಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ತಿಂಗಳ ಬಳಿಕ ಮೈಸೂರಿಗೆ ಆಗಮಿಸಿದ್ದರಿಂದ ನೂರಾರು ಸಾರ್ವಜನಿಕರ ಆಹವಾಲು ಆಲಿಸಿದರು.

ಶಾರದಾದೇವಿನಗರದಲ್ಲಿರುವ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದ ಸಿಎಂ, ಶನಿವಾರ ಬೆಳಿಗ್ಗೆ ವರುಣ, ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರೊಂದಿಗೆ ಚರ್ಚಿಸಿದರು.

ನಂತರ, ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಬರಮಾಡಿಕೊಂಡು ಸಮಾಲೋಚಿಸಿದರು. ನಂತರ, ಹೊರ ಬಂದ ಸಿಎಂ ಮುಂಜಾನೆಯಿಂದ ಕಾದು ನಿಂತಿದ್ದವರ ಬಳಿ ಮನವಿ ಪತ್ರಗಳನ್ನು ಸ್ವೀಕರಿಸಿದರು.

ಒಬ್ಬೊಬ್ಬರಾಗಿ ಮನವಿ ಪತ್ರಗಳನ್ನು ಸ್ವೀಕರಿಸಿ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಅಗತ್ಯ ಕ್ರಮಕೈಗೊಳ್ಳುವಂತೆ ಹೇಳಿದರೆ, ಹಲವು ಅರ್ಜಿಗಳಿಗೆ ಪರಿಶೀಲಿಸುವ ಮಾತು ಹೇಳಿದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ನಾಗರಿಕರು ಸಲ್ಲಿಸಿದ ಅರ್ಜಿಯನ್ನು ಕೊಟ್ಟು ಸಾಧ್ಯವಾದಷ್ಟು ಮಟ್ಟಿಗೆ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದರು.

ಈ ವೇಳೆ ಹಲವರು ಮದುವೆ, ಗೃಹಪ್ರವೇಶದ ಆಹ್ವಾನ ಪತ್ರಿಕೆಯನ್ನು ನೀಡಿದರು. ಇದನ್ನು ಆಪ್ತಸಹಾಯಕರ ಕೈಗೆ ಕೊಟ್ಟು ಇದನ್ನು ನೋಡಿ ಸಹಾಯ ಮಾಡುವಂತೆ ಹೇಳಿದರು.

Tags:
error: Content is protected !!