ಮೈಸೂರು: ಕಾಲು ನೋವಿನಿಂದ ವಿಶ್ರಾಂತಿಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ತಿಂಗಳ ಬಳಿಕ ಮೈಸೂರಿಗೆ ಆಗಮಿಸಿದ್ದರಿಂದ ನೂರಾರು ಸಾರ್ವಜನಿಕರ ಆಹವಾಲು ಆಲಿಸಿದರು.
ಶಾರದಾದೇವಿನಗರದಲ್ಲಿರುವ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದ ಸಿಎಂ, ಶನಿವಾರ ಬೆಳಿಗ್ಗೆ ವರುಣ, ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರೊಂದಿಗೆ ಚರ್ಚಿಸಿದರು.
ನಂತರ, ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಬರಮಾಡಿಕೊಂಡು ಸಮಾಲೋಚಿಸಿದರು. ನಂತರ, ಹೊರ ಬಂದ ಸಿಎಂ ಮುಂಜಾನೆಯಿಂದ ಕಾದು ನಿಂತಿದ್ದವರ ಬಳಿ ಮನವಿ ಪತ್ರಗಳನ್ನು ಸ್ವೀಕರಿಸಿದರು.
ಒಬ್ಬೊಬ್ಬರಾಗಿ ಮನವಿ ಪತ್ರಗಳನ್ನು ಸ್ವೀಕರಿಸಿ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಅಗತ್ಯ ಕ್ರಮಕೈಗೊಳ್ಳುವಂತೆ ಹೇಳಿದರೆ, ಹಲವು ಅರ್ಜಿಗಳಿಗೆ ಪರಿಶೀಲಿಸುವ ಮಾತು ಹೇಳಿದರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ನಾಗರಿಕರು ಸಲ್ಲಿಸಿದ ಅರ್ಜಿಯನ್ನು ಕೊಟ್ಟು ಸಾಧ್ಯವಾದಷ್ಟು ಮಟ್ಟಿಗೆ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದರು.
ಈ ವೇಳೆ ಹಲವರು ಮದುವೆ, ಗೃಹಪ್ರವೇಶದ ಆಹ್ವಾನ ಪತ್ರಿಕೆಯನ್ನು ನೀಡಿದರು. ಇದನ್ನು ಆಪ್ತಸಹಾಯಕರ ಕೈಗೆ ಕೊಟ್ಟು ಇದನ್ನು ನೋಡಿ ಸಹಾಯ ಮಾಡುವಂತೆ ಹೇಳಿದರು.
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ…
ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…
ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…
ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…
ಮುಂಬೈ : ಬಾಲಿವುಡ್, ಟಾಲಿವುಡ್, ಸ್ಯಾಂಡಲ್ವುಡ್ ಸೇರಿದಂತೆ ಎಲ್ಲಾ ವುಡ್ಗಳಲ್ಲಿಯೂ ಧುರಂಧರ್ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…
ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…