ಮೈಸೂರು: ಕಾಲು ನೋವಿನಿಂದ ವಿಶ್ರಾಂತಿಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ತಿಂಗಳ ಬಳಿಕ ಮೈಸೂರಿಗೆ ಆಗಮಿಸಿದ್ದರಿಂದ ನೂರಾರು ಸಾರ್ವಜನಿಕರ ಆಹವಾಲು ಆಲಿಸಿದರು.
ಶಾರದಾದೇವಿನಗರದಲ್ಲಿರುವ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದ ಸಿಎಂ, ಶನಿವಾರ ಬೆಳಿಗ್ಗೆ ವರುಣ, ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರೊಂದಿಗೆ ಚರ್ಚಿಸಿದರು.
ನಂತರ, ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಬರಮಾಡಿಕೊಂಡು ಸಮಾಲೋಚಿಸಿದರು. ನಂತರ, ಹೊರ ಬಂದ ಸಿಎಂ ಮುಂಜಾನೆಯಿಂದ ಕಾದು ನಿಂತಿದ್ದವರ ಬಳಿ ಮನವಿ ಪತ್ರಗಳನ್ನು ಸ್ವೀಕರಿಸಿದರು.
ಒಬ್ಬೊಬ್ಬರಾಗಿ ಮನವಿ ಪತ್ರಗಳನ್ನು ಸ್ವೀಕರಿಸಿ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಅಗತ್ಯ ಕ್ರಮಕೈಗೊಳ್ಳುವಂತೆ ಹೇಳಿದರೆ, ಹಲವು ಅರ್ಜಿಗಳಿಗೆ ಪರಿಶೀಲಿಸುವ ಮಾತು ಹೇಳಿದರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ನಾಗರಿಕರು ಸಲ್ಲಿಸಿದ ಅರ್ಜಿಯನ್ನು ಕೊಟ್ಟು ಸಾಧ್ಯವಾದಷ್ಟು ಮಟ್ಟಿಗೆ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದರು.
ಈ ವೇಳೆ ಹಲವರು ಮದುವೆ, ಗೃಹಪ್ರವೇಶದ ಆಹ್ವಾನ ಪತ್ರಿಕೆಯನ್ನು ನೀಡಿದರು. ಇದನ್ನು ಆಪ್ತಸಹಾಯಕರ ಕೈಗೆ ಕೊಟ್ಟು ಇದನ್ನು ನೋಡಿ ಸಹಾಯ ಮಾಡುವಂತೆ ಹೇಳಿದರು.
ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್ ಸೀಜ್ ಮಾಡಲಾಗಿದೆ. ಎನ್ಸಿಬಿ ಅಧಿಕಾರಿಗಳು…
ಬೆಂಗಳೂರು: ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಭಿನಯದ…
ತುಮಕೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…