ಮೈಸೂರು

ಸಾರ್ವಜನಿಕ ಅಹವಾಲು ಆಲಿಸಿದ ಸಿಎಂ

ಮೈಸೂರು: ಕಾಲು ನೋವಿನಿಂದ ವಿಶ್ರಾಂತಿಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ತಿಂಗಳ ಬಳಿಕ ಮೈಸೂರಿಗೆ ಆಗಮಿಸಿದ್ದರಿಂದ ನೂರಾರು ಸಾರ್ವಜನಿಕರ ಆಹವಾಲು ಆಲಿಸಿದರು.

ಶಾರದಾದೇವಿನಗರದಲ್ಲಿರುವ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದ ಸಿಎಂ, ಶನಿವಾರ ಬೆಳಿಗ್ಗೆ ವರುಣ, ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರೊಂದಿಗೆ ಚರ್ಚಿಸಿದರು.

ನಂತರ, ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಬರಮಾಡಿಕೊಂಡು ಸಮಾಲೋಚಿಸಿದರು. ನಂತರ, ಹೊರ ಬಂದ ಸಿಎಂ ಮುಂಜಾನೆಯಿಂದ ಕಾದು ನಿಂತಿದ್ದವರ ಬಳಿ ಮನವಿ ಪತ್ರಗಳನ್ನು ಸ್ವೀಕರಿಸಿದರು.

ಒಬ್ಬೊಬ್ಬರಾಗಿ ಮನವಿ ಪತ್ರಗಳನ್ನು ಸ್ವೀಕರಿಸಿ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಅಗತ್ಯ ಕ್ರಮಕೈಗೊಳ್ಳುವಂತೆ ಹೇಳಿದರೆ, ಹಲವು ಅರ್ಜಿಗಳಿಗೆ ಪರಿಶೀಲಿಸುವ ಮಾತು ಹೇಳಿದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ನಾಗರಿಕರು ಸಲ್ಲಿಸಿದ ಅರ್ಜಿಯನ್ನು ಕೊಟ್ಟು ಸಾಧ್ಯವಾದಷ್ಟು ಮಟ್ಟಿಗೆ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದರು.

ಈ ವೇಳೆ ಹಲವರು ಮದುವೆ, ಗೃಹಪ್ರವೇಶದ ಆಹ್ವಾನ ಪತ್ರಿಕೆಯನ್ನು ನೀಡಿದರು. ಇದನ್ನು ಆಪ್ತಸಹಾಯಕರ ಕೈಗೆ ಕೊಟ್ಟು ಇದನ್ನು ನೋಡಿ ಸಹಾಯ ಮಾಡುವಂತೆ ಹೇಳಿದರು.

ಆಂದೋಲನ ಡೆಸ್ಕ್

Recent Posts

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

12 mins ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

24 mins ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

26 mins ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

27 mins ago

ಓದುಗರ ಪತ್ರ: ವಿಷಯದ ಗಂಭೀರತೆ ಮರೆತ ಪೊಲೀಸರು

ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ…

29 mins ago

ಓದುಗರ ಪತ್ರ: ಇಂಧನದ ಮೇಲಿನ ತೆರಿಗೆ ಇಳಿಸಿ

ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು…

34 mins ago