ಮೈಸೂರು

ಸಾರ್ವಜನಿಕ ಅಹವಾಲು ಆಲಿಸಿದ ಸಿಎಂ

ಮೈಸೂರು: ಕಾಲು ನೋವಿನಿಂದ ವಿಶ್ರಾಂತಿಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ತಿಂಗಳ ಬಳಿಕ ಮೈಸೂರಿಗೆ ಆಗಮಿಸಿದ್ದರಿಂದ ನೂರಾರು ಸಾರ್ವಜನಿಕರ ಆಹವಾಲು ಆಲಿಸಿದರು.

ಶಾರದಾದೇವಿನಗರದಲ್ಲಿರುವ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದ ಸಿಎಂ, ಶನಿವಾರ ಬೆಳಿಗ್ಗೆ ವರುಣ, ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರೊಂದಿಗೆ ಚರ್ಚಿಸಿದರು.

ನಂತರ, ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಬರಮಾಡಿಕೊಂಡು ಸಮಾಲೋಚಿಸಿದರು. ನಂತರ, ಹೊರ ಬಂದ ಸಿಎಂ ಮುಂಜಾನೆಯಿಂದ ಕಾದು ನಿಂತಿದ್ದವರ ಬಳಿ ಮನವಿ ಪತ್ರಗಳನ್ನು ಸ್ವೀಕರಿಸಿದರು.

ಒಬ್ಬೊಬ್ಬರಾಗಿ ಮನವಿ ಪತ್ರಗಳನ್ನು ಸ್ವೀಕರಿಸಿ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಅಗತ್ಯ ಕ್ರಮಕೈಗೊಳ್ಳುವಂತೆ ಹೇಳಿದರೆ, ಹಲವು ಅರ್ಜಿಗಳಿಗೆ ಪರಿಶೀಲಿಸುವ ಮಾತು ಹೇಳಿದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ನಾಗರಿಕರು ಸಲ್ಲಿಸಿದ ಅರ್ಜಿಯನ್ನು ಕೊಟ್ಟು ಸಾಧ್ಯವಾದಷ್ಟು ಮಟ್ಟಿಗೆ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದರು.

ಈ ವೇಳೆ ಹಲವರು ಮದುವೆ, ಗೃಹಪ್ರವೇಶದ ಆಹ್ವಾನ ಪತ್ರಿಕೆಯನ್ನು ನೀಡಿದರು. ಇದನ್ನು ಆಪ್ತಸಹಾಯಕರ ಕೈಗೆ ಕೊಟ್ಟು ಇದನ್ನು ನೋಡಿ ಸಹಾಯ ಮಾಡುವಂತೆ ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

38 mins ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

50 mins ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

6 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

7 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

13 hours ago