ಮೈಸೂರು : ಸಾಲ ತೀರಿಸಲು ಕಟ್ಟಿದ ಮನೆ ಮಾರಿಬಿಟ್ಟೆ ಒಂದು ದಿನವೂ ವಾಸ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಗರದ ಮಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಯಾಂಕ್ನಲ್ಲಿ ಸಾಲ ಮಾಡಿ ಮೈಸೂರಿನ ವಿಜಯನಗರದಲ್ಲಿ ಕಟ್ಟಿದ್ದ ಮನೆಯನ್ನು ಸಾಲ ತೀರಿಸಲು ಮಾರಿಬಿಟ್ಟೆ. ಇದು ನನ್ನ ಇತಿಹಾಸ ಎಂದು ಸಿದ್ದರಾಮಯ್ಯ ಹೇಳಿದರು.
ಮನೆ ಕಟ್ಟಲು ಕೋ-ಆಪರೇಟಿವ್ ಬ್ಯಾಂಕ್ನಿಂದ ಸಾಲ ಪಡೆದಿದ್ದೆ. ಸಾಲ ಕಟ್ಟಿಲ್ಲ ಎಂದು ಬ್ಯಾಂಕ್ನಿಂದ ನೋಟಿಸ್ ಬಂದಿತ್ತು. ಹೀಗಾಗಿ ಕಟ್ಟಿದ ಮನೆಯಲ್ಲಿ ಒಂದು ದಿನವೂ ವಾಸ ಮಾಡದೆ ಮನೆಯನ್ನೇ ಮಾರಿ ಬ್ಯಾಂಕ್ ಸಾಲ ತೀರಿಸಿದೆ ಎಂದರು.
ಈಗ ಒಂದು ಮನೆ ನಿರ್ಮಾಣ ಮಾಡುತ್ತಿದ್ದೇನೆ. ಅದನ್ನು ಹೊತುಪಡಿಸಿ ಮೈಸೂರಿನಲ್ಲಿ ನನ್ನ ಹೆಸರಿನಲ್ಲಿ ಒಂದೇ ಒಂದು ಸೈಟ್ ಇದ್ದರೆ ಯಾರಾದರು ತೋರಿಸಲಿ ಎಂದು ವಿಪಕ್ಷಗಳಿಗೆ ಸಾವಾಲು ಎಸೆದರು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…