ಮೈಸೂರು

ಇ.ಡಿ. ತನಿಖೆ ರಾಜಕೀಯ ಪ್ರೇರಿತ| ನನ್ನ ಹೆಸರು ಕೆಡಿಸಲು ಪ್ರಯತ್ನ: ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ತನಿಖೆ ನಡೆಸುತ್ತಿರುವುದು ರಾಜಕೀಯ ಪ್ರೇರಿತವಾಗಿದೆ. ನಾನು ಸಿಎಂ ಆಗಿದ್ದು, ಉದ್ದೇಶ ಪೂರ್ವಕವಾಗಿ ನನ್ನ ಹೆಸರನ್ನು ಕೆಡಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಜನವರಿ.31) ಇ.ಡಿ. ಸಂಸ್ಥೆಯೂ ಪಾರ್ವತಿ ಸಿದ್ದರಾಮಯ್ಯ ಅವರಿಗೆ ನೀಡಿರುವ ನೋಟಿಸ್‌ನಲ್ಲಿ ಅಕ್ರಮ ಹಣ ವರ್ಗಾವಣೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್‌ನಲ್ಲಿ ನಾನು ಮತ್ತು ನನ್ನ ಕುಟುಂಬ ತಪ್ಪು ಮಾಡಿಲ್ಲ. ಹಾಗಾಗಿ ಈ ಕೇಸ್‌ನಲ್ಲಿ ಅಕ್ರಮ ಹಣ ವರ್ಗಾವಣೆ ಹೇಗಾಗುತ್ತದೆ? ಈಗ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಸಂಸ್ಥೆ ಸ್ವತಂತ್ರ ತನಿಖೆ ಅಲ್ಲವೇ ಬೇಕು ಎಂದೇ
ಇ.ಡಿ.ಅಧಿಕಾರಿಗಳು ನನ್ನನ್ನು ಟಾರ್ಗೆಟ್‌ ಮಾಡಿ ತನಿಖೆ ನಡೆಸುತ್ತಿದ್ದಾರೆ. ಇ.ಡಿ. ತನಿಖೆ ರಾಜಕೀಯ ಪ್ರೇರಿತವಾಗಿದೆ ಎಂದರು.

ಇ.ಡಿ. ರಿಲೀಸ್‌ ಮಾಡಿರುವುದು ತನಿಖಾ ವರದಿ ಅಲ್ಲ, ಅದು ಜಪ್ತಿ ಆದೇಶ. ನಾನು ರಾಜ್ಯದ ಮುಖ್ಯಮಂತ್ರಿಯಾಗಿದ್ದೇನೆ, ನನ್ನ ಹೆಸರು ಕೆಡಿಸಲು ಪ್ರಯತ್ನ ಮಾಡಿ, ಉದ್ದೇಶ ಪೂರ್ವಕವಾಗಿ ಟಾರ್ಗೆಟ್‌ ಮಾಡುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ಆಗಿರವುದಕ್ಕೆ ಸಾಕ್ಷಿ ಏನಿದೆ? ಇದು ಮನಿ ಲಾಂಡರಿಂಗ್‌ ಬರಲ್ಲ. ಹೀಗಾಗಿ ನನ್ನ ಹೆಸರಿಗೆ ಮಸಿ ಬಳಿಯುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಇದೇ ವೇಳೆ ಮಹಾಕುಂಭಮೇಳದ ಬಗ್ಗೆ ಮಾತನಾಡುವವರು ಅಯೋಗ್ಯರು ಎಂಬ ಬಿ.ವೈ.ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಾಲಿಷ ಹೇಳಿಕೆ ನೀಡಿದ್ದಾರೆ. ಮಹಾಕುಂಭಮೇಳದ ನಡೆಯುತ್ತಿರುವುದು ಎಲ್ಲಿ? ಹಾಗಾದರೆ ಅವರು ಅಯೋಗ್ಯರಾ? ಎಂದು ಪ್ರಶ್ನಿಸಿದರು.

ಇನ್ನೂ ಸಿಎಂ ವಿಚಾರದ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಎಲ್ಲಾ ತೀರ್ಮಾನವನ್ನು ಹೈಕಮಾಂಡ್‌ ತೆಗೆದುಕೊಳ್ಳಲಿದ್ದು,  ಮುಖ್ಯಮಂತ್ರಿ ಸ್ಥಾನದ ಕುರಿತು ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ಹೀಗಾಗಿ ನಾನು ಸಿಎಂ ಸ್ಥಾನದ ಬಗ್ಗೆ ಎಷ್ಟು ಬಾರಿ ಮಾತನಾಡಬೇಕು. ಸಚಿವರು ಮಾತನಾಡಿದ ತಕ್ಷಣ ಸಿಎಂ ಸ್ಥಾನದ ವಿಚಾರ ಆಗುತ್ತಾ? ಎಂದು ಪ್ರಶ್ನಿಸಿದರು. 3-4 ಸಚಿವರು ಸೇರಿದಾಗ ರಾಜಕೀಯ ಚರ್ಚೆ ಮಾಡುತ್ತೇವೆ ಅಷ್ಟೇ ಎಂದು ಹೇಳಿದರು.

AddThis Website Tools
ಅರ್ಚನ ಎಸ್‌ ಎಸ್

Recent Posts

ಮತ್ತೆ ಬರಲಿರುವ ರಾಮಾಚಾರಿ ಇದು ‘ನಾಗರಹಾವು’ ಚಿತ್ರದ ಮುಂದಿನ ಭಾಗ

‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶಿಸಿರುವ ಪಲ್ಲಕ್ಕಿ ರಾಧಾಕೃಷ್ಣ, ಆನಂತರ ಒಂದೆರಡು ಚಿತ್ರಗಳನ್ನು ನಿರ್ದೇಶಿಸುವುದಾಗಿ ಸುದ್ದಿಯಾದರೂ,…

3 hours ago

ಕಿಡಿ ಹೊತ್ತಿಸಲು ಬಂದ ನಿರಂಜನ್ ಹೊಸ ಚಿತ್ರ ‘ಸ್ಪಾರ್ಕ್’ ಪ್ರಾರಂಭ

ವ್ಯವಸ್ಥೆಯ ವಿರುದ್ಧ ಹೋರಾಡುವ ಪತ್ರಕರ್ತರ ಕುರಿತಾಗಿ ಹಲವು ಸಿನಿಮಾಗಳು ಬಂದಿವೆ. ಇದೀಗ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ…

3 hours ago

ಪುನೀತ್‌ 50 ʼಅಪ್ಪುʼ ಮರು ಬಿಡುಗಡೆ

ಪುನೀತ್ ರಾಜ್‌ಕುಮಾರ್ ಇದ್ದಿದ್ದರೆ, ದೊಡ್ಡ ಸಂಭ್ರಮ ಮನೆ ಮಾಡಿರುತ್ತಿತ್ತು. ಮಾರ್ಚ್ ೧೭ಕ್ಕೆ ಅವರು ೫೦ ಮುಗಿಸಿ,೫೧ನೇ ವರ್ಷಕ್ಕೆಕಾಲಿಡುತ್ತಿದ್ದರು. ಪುನೀತ್‌ ಇಲ್ಲದ…

3 hours ago

ನಮಗೆ ಏಕೆ ಕಡಿಮೆ ಸಂಭಾವನೆ: ರಮ್ಯಾ ದಿಟ್ಟ ಪ್ರಶ್ನೆ

ಮನದ ಕಡಲು ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ರಮ್ಯಾ  ಕನ್ನಡ ಚಿತ್ರರಂಗದಲ್ಲಿ ನಾಯಕಿಯರಿಗೆ ಕಡಿಮೆ ಸಂಭಾವನೆ ನೀಡಲಾಗುತ್ತದೆ. ಜೊತೆಗೆ ಒಳ್ಳೆಯ…

3 hours ago

ಓದುಗರ ಪತ್ರ: ವಾಹನ ದಟ್ಟಣೆ ನಿಯಂತ್ರಿಸಿ

ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ…

3 hours ago

ಓದುಗರ ಪತ್ರ: ಪೊಲೀಸ್ ಇಲಾಖೆಗೆ ಅಭಿನಂದನೆಗಳು

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಜನರು ಹಬ್ಬಗಳನ್ನು ಆತಂಕದಲ್ಲೇ ಆಚರಿಸುವಂತೆ ಮಾಡಿತ್ತು. ಇಂತಹ ಆತಂಕದ ಸಂದರ್ಭದಲ್ಲಿಯೂ ಸೂಕ್ಷ್ಮ ಪ್ರದೇಶವಾದ ನಗರದ…

3 hours ago