ಮೈಸೂರು

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

20ರಂದು ಬೆಳಿಗ್ಗೆ 11.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು. ಮಧ್ಯಾಹ್ನ 12ಕ್ಕೆ ನಗರದ ಕಲಾಮಂದಿರದಲ್ಲಿ ಜಿಲ್ಲಾ ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಸ್ಥೆ ಒಕ್ಕೂಟದಿಂದ ಆಯೋಜಿಸಿರುವ ‘ಬಸವ ಜಯಂತಿ-2026 ಉದ್ಘಾಟನೆ ಹಾಗೂ 2026ನೇ ಸಾಲಿನ ‘ಬಸವಶ್ರೀ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 2.45ಕ್ಕೆ ರಸ್ತೆ ಮಾರ್ಗವಾಗಿ ಹುಣಸೂರು ತಾಲ್ಲೂಕಿನ ಉಕ್ಕಿನಕಂತೆ ಮಠಕ್ಕೆ ತೆರಳಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಆಯೋಜಿಸಿರುವ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3.15ಕ್ಕೆ ಹುಣಸೂರಿನಲ್ಲಿ ಕನಕ ಭವನದಲ್ಲಿ ತಾಲ್ಲೂಕು ಕುರುಬರ ಅಭಿವೃದ್ಧಿ ಸಮಿತಿಯಿಂದ ಹಮ್ಮಿಕೊಂಡಿರುವ ಗಣಪತಿ ದೇವಸ್ಥಾನದ ಉದ್ಘಾಟನೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.30ಕ್ಕೆ ಗ್ರಾಮದೇವತೆ ಮುತ್ತು ಮಾರಮ್ಮ ದೇವಸ್ಥಾನದ 23 ನೇ ವಾರ್ಷಿಕೋತ್ಸವ, ಬೆಳ್ಳಿರಥ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವರು. 5.30ಕ್ಕೆ ಸಿಟಿಒ ಕಾಲೊನಿಯಲ್ಲಿ ಕನಕ ಸಾಂಸ್ಕ ತಿಕ ಭವನ ಉದ್ಘಾಟನೆ, ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 7.15ಕ್ಕೆ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು.

21ರಂದು ಬೆಳಿಗ್ಗೆ 11ಕ್ಕೆ ಹೆಲಿಕಾಪ್ಟರ್‌ನಲ್ಲಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ನಡೆಯುವ ‘110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ’ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 1.30ರ ವೇಳೆಗೆ ಹೆಲಿಕಾಪ್ಟರ್‌ನಲ್ಲಿ ಪಿರಿಯಾಪಟ್ಟಣ ತಾಲ್ಲೂಕು ಕ್ರೀಡಾಂಗಣಕ್ಕೆ ಬಂದಿಳಿಯುವರು. ಬಳಿಕ, ಅಲ್ಲಿನ ಹಬಟೂರು ರಸ್ತೆಯ ಪಾರೆಕೊಪ್ಪಲಿನಲ್ಲಿ ನಡೆಯಲಿರುವ ಮಸಣಿಕಮ್ಮ ದೇವಸ್ಥಾನ ನಿರ್ಮಾಣ, ತಾಲ್ಲೂಕು ಒಕ್ಕಲಿಗರ ಸಂಘದ ಸಹಯೋಗದಲ್ಲಿ ನಿರ್ಮಿಸುತ್ತಿರುವ ಕುವೆಂಪು ಭವನ, ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ದೇವಸ್ಥಾನ ಸಂಪರ್ಕಿಸುವ ರಸ್ತೆ ನಿರ್ಮಾಣ ಕಾರ್ಯಕ್ಕೆ ಚಾಲನೆ, ವಿವಿಧ ಇಲಾಖೆಗಳಿಂದ 419.78 ಕೋಟಿ ಮೊತ್ತದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.20ಕ್ಕೆ ಹೆಲಿಕಾಪ್ಟರ್‌ನಲ್ಲಿ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದು, ಸಂಜೆ 6ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

20 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

20 hours ago