ಮೈಸೂರು

ವಸ್ತುಪ್ರದರ್ಶನ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಭಾನುವಾರ ಬೆಳಿಗ್ಗೆ ವಸ್ತು ಪ್ರದರ್ಶನ ಆವರಣದ ಅಧ್ಯಕ್ಷರ ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ವಸ್ತು ಪ್ರದರ್ಶನ ವೀಕ್ಷಿಸಿ, ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ ಎಂದು ಅಧ್ಯಕ್ಷ ಅಯೂಬ್‌ಖಾನ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಮಾಜಿ ಶಾಸಕ ಸಂದೇಶ್ ನಾಗರಾಜ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಕಾರ್ಯಕ್ರಮಕ್ಕೆ ತೆರಳುವ ಮುನ್ನ ಪ್ರಾಽಕಾರದ ಅಧ್ಯಕ್ಷ ಅಯೂಬ್‌ಖಾನ್ ಅವರ ಕಚೇರಿ ಆವರಣಕ್ಕೆ ಆಗಮಿಸಿದರು. ನಂತರ ಅಲ್ಲಿನ ಜೀನವದಿ ಕಾವೇರಿ ಕಲಾ ಗ್ಯಾಲರಿಯನ್ನು ವೀಕ್ಷಿಸಿದ ಅವರು ಸಂತಸ ವ್ಯಕ್ತಪಡಿಸಿದರು.

ನಂತರ ಅಧ್ಯಕ್ಷರ ಕಚೇರಿಗೆ ತೆರಳಿದ ಅವರು ಅಲ್ಲಿಯೇ ಕೆಲಕಾಲ ವಿರಮಿಸಿದರು. ಈ ವೇಳೆ ಸಚಿವರಾದ ಕೆ.ವೆಂಕಟೇಶ್, ಜಮೀರ್ ಅಹಮದ್, ಭೈರತಿ ಸುರೇಶ್, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಪೊನ್ನಣ್ಣ, ರಾಘವೇಂದ್ರ ಇಟ್ನಾಳ್ ಅವರೊಡನೆ ನಗರದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು.

ಈ ವೇಳೆ ವಸ್ತುಪ್ರದರ್ಶನ ಆವರಣದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಯೂಬ್ ಖಾನ್ ಅವರು ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು. ಅಧ್ಯಕ್ಷರಾದ ನಂತರ ವಸ್ತು ಪ್ರದರ್ಶನ ಆವರಣದಲ್ಲಿ ಕೈಗೊಂಡಿರುವ ಹೊಸ ಯೋಜನೆಗಳು ಹಾಗೂ ಜನಾಕರ್ಷಣೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಅವರ ಮಾತುಗಳನ್ನು ಮೌನದಿಂದಲೇ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಸ್ತು ಪ್ರದರ್ಶನ ದಸರಾದ ಪ್ರಮುಖ ಆಕರ್ಷಣೆ. ಹೀಗಾಗಿ ಜನರನ್ನು ಸೆಳೆಯಬಲ್ಲ ಕಾರ್ಯಕ್ರಮಗಳನ್ನು ರೂಪಿಸಬೇಕು. ಮೈಸೂರಿಗೆ ಬಂದವರು ವಸ್ತುಪ್ರದರ್ಶನಕ್ಕೆ ಬರುವಂತಹ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಸೂಚನೆ ನೀಡಿದರು.

ಪುಷ್ಪಾರ್ಚನೆ
ಇದೇ ವೇಳೆ ಕರ್ನಾಟಕ ಸುಗಮ ಸಂಗೀತದ ಪಿತಾಮಹ ಗಾನಕೋಗಿಲೆ ಪಿ.ಕಾಳಿಂಗರಾವ್ ಅವರ ಜನ್ಮದಿನೋತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಕಛೇರಿಯಲ್ಲಿ ಪಿ.ಕಾಳಿಂಗರಾವ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಇದೇ ಸಂಧರ್ಭದಲ್ಲಿ ಪ್ರಾಽಕಾರದ ಅಧ್ಯಕ್ಷ ಅಯೂಬ್ ಖಾನ್ ಮಾತನಾಡಿ ಸುಗಮ ಸಂಗೀತ ಕ್ಷೇತ್ರದ ಪಿತಾಮಹ ಪಿ.ಕಾಳಿಂಗರಾಯರು ಕರ್ನಾಟಕ ಏಕೀಕರಣ ಸಂಧರ್ಭದಲ್ಲಿ ಹಾಡಿದ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಕರ್ನಾಟಕದ ಅಸ್ಮಿತೆ ಶಕ್ತಿಯನ್ನ ಹೆಚ್ಚಿಸಿತು ಎಂದರು.

ಮೈಸೂರು ಅನಂತಸ್ವಾಮಿ ಸೇರಿದಂತೆ ಹಲವಾರು ಗಾಯಕರಿಗೆ ಕಾಳಿಂಗರಾಯರು ಪ್ರೇರಣೆಯಾಗಿದ್ದರು, ಸಾವಿರಾರು ಕಲಾವಿದರು ವಿಶ್ವ ಸುಗಮಸಂಗೀತ ದಿನಾಚರಣೆಯನ್ನಾಗಿಯೂ ಸಹ ಆಚರಿಸುತ್ತಿದ್ದಾರೆ. ವಸ್ತು ಪ್ರದರ್ಶನದ ಆವರಣದಲ್ಲಿ ಪಿ.ಕಾಳಿಂಗರಾಯರ ಹೆಸರಿನಲ್ಲಿ ಸಾಂಸ್ಕ ತಿಕ ವೇದಿಕೆಯಿದ್ದು, ಪ್ರತಿದಿನ ವಿವಿಧ ಕಲಾಪ್ರಕಾರಗಳ ರಾಜ್ಯದ ವಿವಿಧ ಜಿಲ್ಲೆಯ ಮತ್ತು ಸ್ಥಳೀಯ ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರಗೆ ಮಾಹಿತಿ ನೀಡಿದರು.

ಇದೇ ಸಂಧರ್ಭದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಕಸಾಪ ಮಾಜಿ ಅಧ್ಯಕ್ಷ ವೈ.ಡಿ.ರಾಜಣ್ಣ, ಚಂದ್ರಶೇಖರ್, ಸುಗಮ ಸಂಗೀತ ಪರಿಷತ್ ಅಧ್ಯಕ್ಷ ನಾಗರಾಜ ವಿ ಭೈರಿ, ಮಾಜಿ ಪಾಲಿಕೆ ಸದಸ್ಯರಾದ ಸೈಯದ್ ಹಜರತ್, ಕೆ.ವಿ.ಮಲ್ಲೇಶ್, ರಘುರಾಜೇ ಅರಸ್, ಗಯಾಜ್ ಅಹಮದ್, ರಾಕೇಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಕೈಸರ್ ಅಹಮದ್, ಮಹೇಂದ್ರ ಕಾಗಿನೆಲೆ, ರಂಗಸ್ವಾಮಿ ಪಾಪು, ಲತಾ ರಂಗನಾಥ್, ಜಯಲಕ್ಷ್ಮಿ, ಶಾಂತಮ್ಮ, ನಾಗೇಶ್ ಇನ್ನಿತರರು ಇದ್ದರು

ಆಂದೋಲನ ಡೆಸ್ಕ್

Recent Posts

ಫಾರುಕ್ ಹತ್ಯೆ ಯತ್ನ : ಆರೋಪಿ ಕಮಲ್‌ ಸಿಂಗ್‌ ಹೇಳಿದ್ದೇನು?

ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…

14 mins ago

ಅಡುಗೆ ಅನಿಲ ಕೊರತೆ ; ಸಂಸದರು ಬಾಯಿ ಬಿಡಬೇಕು ; ಡಿ.ಕೆ.ಶಿವಕುಮಾರ್‌

ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…

40 mins ago

ಫಲ ನೀಡಿದ ಮಾತುಕತೆ : ಹಾರ್ಮುಜ್ ಜಲಸಂಧಿ ದಾಟಿದ ತೈಲ ಟ್ಯಾಂಕರ್‌

ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…

1 hour ago

ವೈರಲ್‌ ಹುಡುಗಿ ʻಮೊನಾಲಿಸಾʼ ಮದುವೆಗೆ ತಂದೆ ವಿರೋಧಿಸಿದ್ದೇಕೆ….. ಯಾರಿ ಈ ಹುಡುಗ?

ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…

2 hours ago

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

2 hours ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

2 hours ago