ಮೈಸೂರು

ವಸ್ತುಪ್ರದರ್ಶನ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಭಾನುವಾರ ಬೆಳಿಗ್ಗೆ ವಸ್ತು ಪ್ರದರ್ಶನ ಆವರಣದ ಅಧ್ಯಕ್ಷರ ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ವಸ್ತು ಪ್ರದರ್ಶನ ವೀಕ್ಷಿಸಿ, ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ ಎಂದು ಅಧ್ಯಕ್ಷ ಅಯೂಬ್‌ಖಾನ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಮಾಜಿ ಶಾಸಕ ಸಂದೇಶ್ ನಾಗರಾಜ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಕಾರ್ಯಕ್ರಮಕ್ಕೆ ತೆರಳುವ ಮುನ್ನ ಪ್ರಾಽಕಾರದ ಅಧ್ಯಕ್ಷ ಅಯೂಬ್‌ಖಾನ್ ಅವರ ಕಚೇರಿ ಆವರಣಕ್ಕೆ ಆಗಮಿಸಿದರು. ನಂತರ ಅಲ್ಲಿನ ಜೀನವದಿ ಕಾವೇರಿ ಕಲಾ ಗ್ಯಾಲರಿಯನ್ನು ವೀಕ್ಷಿಸಿದ ಅವರು ಸಂತಸ ವ್ಯಕ್ತಪಡಿಸಿದರು.

ನಂತರ ಅಧ್ಯಕ್ಷರ ಕಚೇರಿಗೆ ತೆರಳಿದ ಅವರು ಅಲ್ಲಿಯೇ ಕೆಲಕಾಲ ವಿರಮಿಸಿದರು. ಈ ವೇಳೆ ಸಚಿವರಾದ ಕೆ.ವೆಂಕಟೇಶ್, ಜಮೀರ್ ಅಹಮದ್, ಭೈರತಿ ಸುರೇಶ್, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಪೊನ್ನಣ್ಣ, ರಾಘವೇಂದ್ರ ಇಟ್ನಾಳ್ ಅವರೊಡನೆ ನಗರದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು.

ಈ ವೇಳೆ ವಸ್ತುಪ್ರದರ್ಶನ ಆವರಣದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಯೂಬ್ ಖಾನ್ ಅವರು ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು. ಅಧ್ಯಕ್ಷರಾದ ನಂತರ ವಸ್ತು ಪ್ರದರ್ಶನ ಆವರಣದಲ್ಲಿ ಕೈಗೊಂಡಿರುವ ಹೊಸ ಯೋಜನೆಗಳು ಹಾಗೂ ಜನಾಕರ್ಷಣೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಅವರ ಮಾತುಗಳನ್ನು ಮೌನದಿಂದಲೇ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಸ್ತು ಪ್ರದರ್ಶನ ದಸರಾದ ಪ್ರಮುಖ ಆಕರ್ಷಣೆ. ಹೀಗಾಗಿ ಜನರನ್ನು ಸೆಳೆಯಬಲ್ಲ ಕಾರ್ಯಕ್ರಮಗಳನ್ನು ರೂಪಿಸಬೇಕು. ಮೈಸೂರಿಗೆ ಬಂದವರು ವಸ್ತುಪ್ರದರ್ಶನಕ್ಕೆ ಬರುವಂತಹ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಸೂಚನೆ ನೀಡಿದರು.

ಪುಷ್ಪಾರ್ಚನೆ
ಇದೇ ವೇಳೆ ಕರ್ನಾಟಕ ಸುಗಮ ಸಂಗೀತದ ಪಿತಾಮಹ ಗಾನಕೋಗಿಲೆ ಪಿ.ಕಾಳಿಂಗರಾವ್ ಅವರ ಜನ್ಮದಿನೋತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಕಛೇರಿಯಲ್ಲಿ ಪಿ.ಕಾಳಿಂಗರಾವ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಇದೇ ಸಂಧರ್ಭದಲ್ಲಿ ಪ್ರಾಽಕಾರದ ಅಧ್ಯಕ್ಷ ಅಯೂಬ್ ಖಾನ್ ಮಾತನಾಡಿ ಸುಗಮ ಸಂಗೀತ ಕ್ಷೇತ್ರದ ಪಿತಾಮಹ ಪಿ.ಕಾಳಿಂಗರಾಯರು ಕರ್ನಾಟಕ ಏಕೀಕರಣ ಸಂಧರ್ಭದಲ್ಲಿ ಹಾಡಿದ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಕರ್ನಾಟಕದ ಅಸ್ಮಿತೆ ಶಕ್ತಿಯನ್ನ ಹೆಚ್ಚಿಸಿತು ಎಂದರು.

ಮೈಸೂರು ಅನಂತಸ್ವಾಮಿ ಸೇರಿದಂತೆ ಹಲವಾರು ಗಾಯಕರಿಗೆ ಕಾಳಿಂಗರಾಯರು ಪ್ರೇರಣೆಯಾಗಿದ್ದರು, ಸಾವಿರಾರು ಕಲಾವಿದರು ವಿಶ್ವ ಸುಗಮಸಂಗೀತ ದಿನಾಚರಣೆಯನ್ನಾಗಿಯೂ ಸಹ ಆಚರಿಸುತ್ತಿದ್ದಾರೆ. ವಸ್ತು ಪ್ರದರ್ಶನದ ಆವರಣದಲ್ಲಿ ಪಿ.ಕಾಳಿಂಗರಾಯರ ಹೆಸರಿನಲ್ಲಿ ಸಾಂಸ್ಕ ತಿಕ ವೇದಿಕೆಯಿದ್ದು, ಪ್ರತಿದಿನ ವಿವಿಧ ಕಲಾಪ್ರಕಾರಗಳ ರಾಜ್ಯದ ವಿವಿಧ ಜಿಲ್ಲೆಯ ಮತ್ತು ಸ್ಥಳೀಯ ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರಗೆ ಮಾಹಿತಿ ನೀಡಿದರು.

ಇದೇ ಸಂಧರ್ಭದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಕಸಾಪ ಮಾಜಿ ಅಧ್ಯಕ್ಷ ವೈ.ಡಿ.ರಾಜಣ್ಣ, ಚಂದ್ರಶೇಖರ್, ಸುಗಮ ಸಂಗೀತ ಪರಿಷತ್ ಅಧ್ಯಕ್ಷ ನಾಗರಾಜ ವಿ ಭೈರಿ, ಮಾಜಿ ಪಾಲಿಕೆ ಸದಸ್ಯರಾದ ಸೈಯದ್ ಹಜರತ್, ಕೆ.ವಿ.ಮಲ್ಲೇಶ್, ರಘುರಾಜೇ ಅರಸ್, ಗಯಾಜ್ ಅಹಮದ್, ರಾಕೇಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಕೈಸರ್ ಅಹಮದ್, ಮಹೇಂದ್ರ ಕಾಗಿನೆಲೆ, ರಂಗಸ್ವಾಮಿ ಪಾಪು, ಲತಾ ರಂಗನಾಥ್, ಜಯಲಕ್ಷ್ಮಿ, ಶಾಂತಮ್ಮ, ನಾಗೇಶ್ ಇನ್ನಿತರರು ಇದ್ದರು

ಆಂದೋಲನ ಡೆಸ್ಕ್

Recent Posts

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

34 mins ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

6 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

7 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

7 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

8 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

24 hours ago