ಮೈಸೂರು

ವಸ್ತುಪ್ರದರ್ಶನ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಭಾನುವಾರ ಬೆಳಿಗ್ಗೆ ವಸ್ತು ಪ್ರದರ್ಶನ ಆವರಣದ ಅಧ್ಯಕ್ಷರ ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ವಸ್ತು ಪ್ರದರ್ಶನ ವೀಕ್ಷಿಸಿ, ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ ಎಂದು ಅಧ್ಯಕ್ಷ ಅಯೂಬ್‌ಖಾನ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಮಾಜಿ ಶಾಸಕ ಸಂದೇಶ್ ನಾಗರಾಜ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಕಾರ್ಯಕ್ರಮಕ್ಕೆ ತೆರಳುವ ಮುನ್ನ ಪ್ರಾಽಕಾರದ ಅಧ್ಯಕ್ಷ ಅಯೂಬ್‌ಖಾನ್ ಅವರ ಕಚೇರಿ ಆವರಣಕ್ಕೆ ಆಗಮಿಸಿದರು. ನಂತರ ಅಲ್ಲಿನ ಜೀನವದಿ ಕಾವೇರಿ ಕಲಾ ಗ್ಯಾಲರಿಯನ್ನು ವೀಕ್ಷಿಸಿದ ಅವರು ಸಂತಸ ವ್ಯಕ್ತಪಡಿಸಿದರು.

ನಂತರ ಅಧ್ಯಕ್ಷರ ಕಚೇರಿಗೆ ತೆರಳಿದ ಅವರು ಅಲ್ಲಿಯೇ ಕೆಲಕಾಲ ವಿರಮಿಸಿದರು. ಈ ವೇಳೆ ಸಚಿವರಾದ ಕೆ.ವೆಂಕಟೇಶ್, ಜಮೀರ್ ಅಹಮದ್, ಭೈರತಿ ಸುರೇಶ್, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಪೊನ್ನಣ್ಣ, ರಾಘವೇಂದ್ರ ಇಟ್ನಾಳ್ ಅವರೊಡನೆ ನಗರದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು.

ಈ ವೇಳೆ ವಸ್ತುಪ್ರದರ್ಶನ ಆವರಣದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಯೂಬ್ ಖಾನ್ ಅವರು ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು. ಅಧ್ಯಕ್ಷರಾದ ನಂತರ ವಸ್ತು ಪ್ರದರ್ಶನ ಆವರಣದಲ್ಲಿ ಕೈಗೊಂಡಿರುವ ಹೊಸ ಯೋಜನೆಗಳು ಹಾಗೂ ಜನಾಕರ್ಷಣೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಅವರ ಮಾತುಗಳನ್ನು ಮೌನದಿಂದಲೇ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಸ್ತು ಪ್ರದರ್ಶನ ದಸರಾದ ಪ್ರಮುಖ ಆಕರ್ಷಣೆ. ಹೀಗಾಗಿ ಜನರನ್ನು ಸೆಳೆಯಬಲ್ಲ ಕಾರ್ಯಕ್ರಮಗಳನ್ನು ರೂಪಿಸಬೇಕು. ಮೈಸೂರಿಗೆ ಬಂದವರು ವಸ್ತುಪ್ರದರ್ಶನಕ್ಕೆ ಬರುವಂತಹ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಸೂಚನೆ ನೀಡಿದರು.

ಪುಷ್ಪಾರ್ಚನೆ
ಇದೇ ವೇಳೆ ಕರ್ನಾಟಕ ಸುಗಮ ಸಂಗೀತದ ಪಿತಾಮಹ ಗಾನಕೋಗಿಲೆ ಪಿ.ಕಾಳಿಂಗರಾವ್ ಅವರ ಜನ್ಮದಿನೋತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಕಛೇರಿಯಲ್ಲಿ ಪಿ.ಕಾಳಿಂಗರಾವ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಇದೇ ಸಂಧರ್ಭದಲ್ಲಿ ಪ್ರಾಽಕಾರದ ಅಧ್ಯಕ್ಷ ಅಯೂಬ್ ಖಾನ್ ಮಾತನಾಡಿ ಸುಗಮ ಸಂಗೀತ ಕ್ಷೇತ್ರದ ಪಿತಾಮಹ ಪಿ.ಕಾಳಿಂಗರಾಯರು ಕರ್ನಾಟಕ ಏಕೀಕರಣ ಸಂಧರ್ಭದಲ್ಲಿ ಹಾಡಿದ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಕರ್ನಾಟಕದ ಅಸ್ಮಿತೆ ಶಕ್ತಿಯನ್ನ ಹೆಚ್ಚಿಸಿತು ಎಂದರು.

ಮೈಸೂರು ಅನಂತಸ್ವಾಮಿ ಸೇರಿದಂತೆ ಹಲವಾರು ಗಾಯಕರಿಗೆ ಕಾಳಿಂಗರಾಯರು ಪ್ರೇರಣೆಯಾಗಿದ್ದರು, ಸಾವಿರಾರು ಕಲಾವಿದರು ವಿಶ್ವ ಸುಗಮಸಂಗೀತ ದಿನಾಚರಣೆಯನ್ನಾಗಿಯೂ ಸಹ ಆಚರಿಸುತ್ತಿದ್ದಾರೆ. ವಸ್ತು ಪ್ರದರ್ಶನದ ಆವರಣದಲ್ಲಿ ಪಿ.ಕಾಳಿಂಗರಾಯರ ಹೆಸರಿನಲ್ಲಿ ಸಾಂಸ್ಕ ತಿಕ ವೇದಿಕೆಯಿದ್ದು, ಪ್ರತಿದಿನ ವಿವಿಧ ಕಲಾಪ್ರಕಾರಗಳ ರಾಜ್ಯದ ವಿವಿಧ ಜಿಲ್ಲೆಯ ಮತ್ತು ಸ್ಥಳೀಯ ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರಗೆ ಮಾಹಿತಿ ನೀಡಿದರು.

ಇದೇ ಸಂಧರ್ಭದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಕಸಾಪ ಮಾಜಿ ಅಧ್ಯಕ್ಷ ವೈ.ಡಿ.ರಾಜಣ್ಣ, ಚಂದ್ರಶೇಖರ್, ಸುಗಮ ಸಂಗೀತ ಪರಿಷತ್ ಅಧ್ಯಕ್ಷ ನಾಗರಾಜ ವಿ ಭೈರಿ, ಮಾಜಿ ಪಾಲಿಕೆ ಸದಸ್ಯರಾದ ಸೈಯದ್ ಹಜರತ್, ಕೆ.ವಿ.ಮಲ್ಲೇಶ್, ರಘುರಾಜೇ ಅರಸ್, ಗಯಾಜ್ ಅಹಮದ್, ರಾಕೇಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಕೈಸರ್ ಅಹಮದ್, ಮಹೇಂದ್ರ ಕಾಗಿನೆಲೆ, ರಂಗಸ್ವಾಮಿ ಪಾಪು, ಲತಾ ರಂಗನಾಥ್, ಜಯಲಕ್ಷ್ಮಿ, ಶಾಂತಮ್ಮ, ನಾಗೇಶ್ ಇನ್ನಿತರರು ಇದ್ದರು

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

5 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

5 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

6 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

6 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

7 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

8 hours ago