ಮೈಸೂರು

ವಸ್ತುಪ್ರದರ್ಶನ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಭಾನುವಾರ ಬೆಳಿಗ್ಗೆ ವಸ್ತು ಪ್ರದರ್ಶನ ಆವರಣದ ಅಧ್ಯಕ್ಷರ ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ವಸ್ತು ಪ್ರದರ್ಶನ ವೀಕ್ಷಿಸಿ, ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ ಎಂದು ಅಧ್ಯಕ್ಷ ಅಯೂಬ್‌ಖಾನ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಮಾಜಿ ಶಾಸಕ ಸಂದೇಶ್ ನಾಗರಾಜ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಕಾರ್ಯಕ್ರಮಕ್ಕೆ ತೆರಳುವ ಮುನ್ನ ಪ್ರಾಽಕಾರದ ಅಧ್ಯಕ್ಷ ಅಯೂಬ್‌ಖಾನ್ ಅವರ ಕಚೇರಿ ಆವರಣಕ್ಕೆ ಆಗಮಿಸಿದರು. ನಂತರ ಅಲ್ಲಿನ ಜೀನವದಿ ಕಾವೇರಿ ಕಲಾ ಗ್ಯಾಲರಿಯನ್ನು ವೀಕ್ಷಿಸಿದ ಅವರು ಸಂತಸ ವ್ಯಕ್ತಪಡಿಸಿದರು.

ನಂತರ ಅಧ್ಯಕ್ಷರ ಕಚೇರಿಗೆ ತೆರಳಿದ ಅವರು ಅಲ್ಲಿಯೇ ಕೆಲಕಾಲ ವಿರಮಿಸಿದರು. ಈ ವೇಳೆ ಸಚಿವರಾದ ಕೆ.ವೆಂಕಟೇಶ್, ಜಮೀರ್ ಅಹಮದ್, ಭೈರತಿ ಸುರೇಶ್, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಪೊನ್ನಣ್ಣ, ರಾಘವೇಂದ್ರ ಇಟ್ನಾಳ್ ಅವರೊಡನೆ ನಗರದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು.

ಈ ವೇಳೆ ವಸ್ತುಪ್ರದರ್ಶನ ಆವರಣದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಯೂಬ್ ಖಾನ್ ಅವರು ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು. ಅಧ್ಯಕ್ಷರಾದ ನಂತರ ವಸ್ತು ಪ್ರದರ್ಶನ ಆವರಣದಲ್ಲಿ ಕೈಗೊಂಡಿರುವ ಹೊಸ ಯೋಜನೆಗಳು ಹಾಗೂ ಜನಾಕರ್ಷಣೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಅವರ ಮಾತುಗಳನ್ನು ಮೌನದಿಂದಲೇ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಸ್ತು ಪ್ರದರ್ಶನ ದಸರಾದ ಪ್ರಮುಖ ಆಕರ್ಷಣೆ. ಹೀಗಾಗಿ ಜನರನ್ನು ಸೆಳೆಯಬಲ್ಲ ಕಾರ್ಯಕ್ರಮಗಳನ್ನು ರೂಪಿಸಬೇಕು. ಮೈಸೂರಿಗೆ ಬಂದವರು ವಸ್ತುಪ್ರದರ್ಶನಕ್ಕೆ ಬರುವಂತಹ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಸೂಚನೆ ನೀಡಿದರು.

ಪುಷ್ಪಾರ್ಚನೆ
ಇದೇ ವೇಳೆ ಕರ್ನಾಟಕ ಸುಗಮ ಸಂಗೀತದ ಪಿತಾಮಹ ಗಾನಕೋಗಿಲೆ ಪಿ.ಕಾಳಿಂಗರಾವ್ ಅವರ ಜನ್ಮದಿನೋತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಕಛೇರಿಯಲ್ಲಿ ಪಿ.ಕಾಳಿಂಗರಾವ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಇದೇ ಸಂಧರ್ಭದಲ್ಲಿ ಪ್ರಾಽಕಾರದ ಅಧ್ಯಕ್ಷ ಅಯೂಬ್ ಖಾನ್ ಮಾತನಾಡಿ ಸುಗಮ ಸಂಗೀತ ಕ್ಷೇತ್ರದ ಪಿತಾಮಹ ಪಿ.ಕಾಳಿಂಗರಾಯರು ಕರ್ನಾಟಕ ಏಕೀಕರಣ ಸಂಧರ್ಭದಲ್ಲಿ ಹಾಡಿದ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಕರ್ನಾಟಕದ ಅಸ್ಮಿತೆ ಶಕ್ತಿಯನ್ನ ಹೆಚ್ಚಿಸಿತು ಎಂದರು.

ಮೈಸೂರು ಅನಂತಸ್ವಾಮಿ ಸೇರಿದಂತೆ ಹಲವಾರು ಗಾಯಕರಿಗೆ ಕಾಳಿಂಗರಾಯರು ಪ್ರೇರಣೆಯಾಗಿದ್ದರು, ಸಾವಿರಾರು ಕಲಾವಿದರು ವಿಶ್ವ ಸುಗಮಸಂಗೀತ ದಿನಾಚರಣೆಯನ್ನಾಗಿಯೂ ಸಹ ಆಚರಿಸುತ್ತಿದ್ದಾರೆ. ವಸ್ತು ಪ್ರದರ್ಶನದ ಆವರಣದಲ್ಲಿ ಪಿ.ಕಾಳಿಂಗರಾಯರ ಹೆಸರಿನಲ್ಲಿ ಸಾಂಸ್ಕ ತಿಕ ವೇದಿಕೆಯಿದ್ದು, ಪ್ರತಿದಿನ ವಿವಿಧ ಕಲಾಪ್ರಕಾರಗಳ ರಾಜ್ಯದ ವಿವಿಧ ಜಿಲ್ಲೆಯ ಮತ್ತು ಸ್ಥಳೀಯ ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರಗೆ ಮಾಹಿತಿ ನೀಡಿದರು.

ಇದೇ ಸಂಧರ್ಭದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಕಸಾಪ ಮಾಜಿ ಅಧ್ಯಕ್ಷ ವೈ.ಡಿ.ರಾಜಣ್ಣ, ಚಂದ್ರಶೇಖರ್, ಸುಗಮ ಸಂಗೀತ ಪರಿಷತ್ ಅಧ್ಯಕ್ಷ ನಾಗರಾಜ ವಿ ಭೈರಿ, ಮಾಜಿ ಪಾಲಿಕೆ ಸದಸ್ಯರಾದ ಸೈಯದ್ ಹಜರತ್, ಕೆ.ವಿ.ಮಲ್ಲೇಶ್, ರಘುರಾಜೇ ಅರಸ್, ಗಯಾಜ್ ಅಹಮದ್, ರಾಕೇಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಕೈಸರ್ ಅಹಮದ್, ಮಹೇಂದ್ರ ಕಾಗಿನೆಲೆ, ರಂಗಸ್ವಾಮಿ ಪಾಪು, ಲತಾ ರಂಗನಾಥ್, ಜಯಲಕ್ಷ್ಮಿ, ಶಾಂತಮ್ಮ, ನಾಗೇಶ್ ಇನ್ನಿತರರು ಇದ್ದರು

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago