ಮೈಸೂರು

ಇಂದು ಕುಪ್ಯಾ ಗ್ರಾಮಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಎಲ್ಲೆಡೆ ರಾರಾಜಿಸುತ್ತಿರುವ ಫ್ಲೆಕ್ಸ್‌ಗಳು

ಮೈಸೂರು: ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ದಾಖಲೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತವರೂರು ಮೈಸೂರಿಗೆ ಆಗಮಿಸುತ್ತಿದ್ದಾರೆ. ತವರು ಕ್ಷೇತ್ರದಲ್ಲಿ ನಡೆಯುವ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.

ಇಂದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ. ಜಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಕಾರ್ಯಕ್ರಮ ಉದ್ಘಾಟನೆ ಬಳಿಕ ಭಕ್ತರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದು, ನಂತರ ಅವರು ತಮ್ಮ ವರುಣ ಕ್ಷೇತ್ರದ ಕುಪ್ಯಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ಬಾಬು ಜಗಜೀವನ್ ರಾಮ್ ಅವರ ಪುತ್ಥಳಿಗಳನ್ನು ಅನಾವರಣಗೊಳಿಸಲಿದ್ದಾರೆ.

ಇದೇ ವೇಳೆ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ. ರಸ್ತೆ, ಮೂಲಸೌಕರ್ಯ ಹಾಗೂ ಸಾರ್ವಜನಿಕ ಉಪಯೋಗಕ್ಕೆ ಸಂಬಂಧಿಸಿದ ಯೋಜನೆಗಳು ಇದರಲ್ಲಿ ಸೇರಿವೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿಯ ಆಗಮನಕ್ಕೆ ಕ್ಷೇತ್ರದ ಜನರು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, ಹಬ್ಬದ ವಾತಾವರಣದಂತೆ ಸ್ವಾಗತಿಸಲು ತಯಾರಿ ನಡೆಸಲಾಗಿದೆ. ಗ್ರಾಮಗಳಿಂದ ನಗರವರೆಗೆ ಸಿಎಂ ಬರಮಾಡಿಕೊಳ್ಳಲು ಬೆಂಬಲಿಗರು ಹಾಗೂ ಕಾರ್ಯಕರ್ತರು ಫ್ಲೆಕ್ಸ್ ಹಾಕಿ ಉತ್ಸಾಹದಿಂದ ಸಜ್ಜಾಗಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಮನಗರ: ಲಾರಿಗೆ ಕಾರು ಡಿಕ್ಕಿ: ಮೂವರು ದುರ್ಮರಣ

ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ…

23 mins ago

ಕುವೈತ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ

ಕುವೈತ್‌ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್‌ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್‌ ಅಂತರಾಷ್ಟ್ರೀಯ…

33 mins ago

ಪಕ್ಕದ ಊರಿಗೆ ಪೂಜೆಗೆ ಹೋಗಿದ್ದ ಅರ್ಚಕ ನಿಗೂಢವಾಗಿ ಶವವಾಗಿ ಪತ್ತೆ

ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ…

42 mins ago

ಓದುಗರ ಪತ್ರ: ಬೀದಿ ನಾಯಿಗಳ ಹಾವಳಿ ತಪ್ಪಿಸಿ

ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…

2 hours ago

ಓದುಗರ ಪತ್ರ: ತಾಣ..ಬಾಣ !

ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು…

2 hours ago

ಓದುಗರ ಪತ್ರ: ಬೋಗಾದಿ- ಗದ್ದಿಗೆ ಜೋಡಿ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ

ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು…

2 hours ago