ಮೈಸೂರು

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ : ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ

ಮೈಸೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಇಲ್ಲಿಯವರೆಗೆ ಕಾನೂನಿನ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದಾರೆ. ಇವತ್ತಲ್ಲ ನಾಳೆ ಅವರು ಜೈಲಿಗೆ ಹೋಗಲೇ ಬೇಕಾದ ಸಂಧರ್ಭ ಬಂದೇ ಬರುತ್ತದೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣ ಸಂಬಂಧ ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆಗೆ ಬೇಕಾದ ಪೂರಕ ಸಾಕ್ಷ್ಯಾಧಾರಗಳ ಒದಗಿಸಿದ್ದೇನೆ. ಸಾಕ್ಷ್ಯಾಧಾರಗಳ ನಾಶ ಮಾಡುವ ಕೆಲಸವನ್ನ ಪೋಲಿಸರಿಂದ ಮಾಡಿಸುತ್ತಿದ್ದಾರೆ. ಸಿಎಂ ತಪ್ಪಿತಸ್ಥರೆಂದು 14 ನಿವೇಶನಗಳ ಹಿಂದಿರುಗಿಸಿದಾಗಲೇ ಜನರಿಗೆ ಗೊತ್ತಾಗಿದೆ. ಕಾದು ನೋಡಿ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ ಎಂದು ಭವಿಷ್ಯ ನುಡಿದರು.

ಲೋಕಾಯುಕ್ತ ಎಸ್‌ಪಿಯನ್ನು ವರ್ಗಾವಣೆ ಮಾಡಬೇಕು: ಮೈಸೂರು ಲೋಕಾಯುಕ್ತಾ ಎಸ್ಪಿ ಟಿ.ಜೆ ಉದೇಶ್ ಕರ್ತವ್ಯ ಲೋಪ ಎಸಗಿದ್ದಾರೆ. ಮುಡಾ ಪ್ರಕರಣದ ತನಿಖೆಯನ್ನ ಪಾರದರ್ಶಕವಾಗಿ ಮಾಡುತ್ತಿಲ್ಲ. ಸಾಕ್ಷ್ಯಾಧಾರಗಳ ನಾಶಪಡಿಸುವ ಕೆಲಸ ಮಾಡುತ್ತಿದ್ದಾರೆ.

ಸಿದ್ದರಾಮಯ್ಯರನ್ನ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಇವರೇ ಸಹಕರಿಸುತ್ತಿದ್ದಾರೆ. ಈ ಕೂಡಲೇ ಉದೇಶ್ ಅವರನ್ನ ವರ್ಗಾವಣೆ ಮಾಡಬೇಕು ಎಂದು ನಿನ್ನೆ ಕೋರ್ಟ್ ನಲ್ಲಿ ವಾದ ಮಂಡಿಸಿದ್ದೇನೆ. ವಿಚಾರಣೆಯನ್ನ ಜುಲೈ 15 ಕ್ಕೆ ಮುಂದೂಡಿದ್ದಾರೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

3 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

3 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

4 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

4 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

5 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

6 hours ago