ಮೈಸೂರು

ಅವರು ಅಧಿಕಾರಕ್ಕೆ ಬಂದರೆ ತಾನೇ ಹೆಸರು ಕಿತ್ತಾಕುವುದು : ಎಚ್.ಡಿ.ಕೆ ಹೇಳಿಕೆಗೆ ಸಿ.ಎಂ ಟಾಂಗ್

ಮೈಸೂರು: ಅವರು ಅಧಿಕಾರಕ್ಕೆ ಬಂದರೆ ತಾನೇ ಹೆಸರು ಕಿತ್ತಾಕುವುದು ಎಂದು ನಾವು ಬಂದರೆ ಹೆಸರು ಕಿತ್ತಾಕುತ್ತೇವೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.  ನಗರದಲ್ಲಿ ಮಾತನಾಡಿದ ಸಿಎಂ, ಅವರು ಅಧಿಕಾರಕ್ಕೆ ಬಂದರೆ ತಾನೇ ಕಿತ್ತಾಕುವುದು ? ಜನರು ಆಶೀರ್ವಾದ ಮಾಡಿದ ಕಾರಣ ನಾನು ಸಿಎಂ ಆಗಿದ್ದೇನೆ. ಇವರಿಗೆ ಜನರೇ ಆಶೀರ್ವಾದ ಮಾಡುವುದಿಲ್ಲ. ಇವರು ಇನ್ನು ಎಲ್ಲಿ ಸಿಎಂ ಆಗುತ್ತಾರೆ. ಹೆಸರು ಬದಲಾವಣೆ ಮಾಡುವುದು ಭ್ರಮೆ ಎಂದು ಟಾಂಗ್‌ ಕೊಟ್ಟಿದ್ದಾರೆ.

ರಾಮನಗರ ಜಿಲ್ಲೆಯ ಹಸೆರು ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಮನಗರ ಜಿಲ್ಲೆಯ ಎಲ್ಲಾ ಮುಖಂಡರು ಬಂದಿದ್ರು. ಮೊದಲಿನಿಂದಲೂ ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಾಗಬೇಕು ಎಂಬುದು ಅವರ ಇಚ್ಚೆ. ಆ ಬಗ್ಗೆ ಮನವಿ ಕೊಟ್ಟಿದ್ದಾರೆ. ಕ್ಯಾಬಿನೆಟ್‌ ನಲ್ಲಿಟ್ಟು ತೀರ್ಮಾನ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದರು.

ಇದೇ ವೇಳೆ ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇಡಿ ದಾಳಿ ವಿಚಾರಕ್ಕೆ ಮಾತನಾಡಿ, ಇಡಿ ಅವರ ಕೆಲಸವನ್ನ ಅವರು ಮಾಡುತ್ತಾರೆ. ಇದರ ಬಗ್ಗೆ ನಾನು ಹೆಚ್ಚು ಹೇಳುವುದಿಲ್ಲ. ದಾಳಿ ಮಾಡಲಿ ನಾವು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ ಎಂದು ಹೇಳಿದರು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

36 mins ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

1 hour ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

1 hour ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

1 hour ago

ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್‌ ಆದ ವ್ಯಕ್ತಿ

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…

2 hours ago

“ಸಿದ್ದರಾಮಯ್ಯ ಅನಿವಾರ್ಯತೆ” ವಿಚಾರವಾಗಿ ನಾಳೆ ಅಹಿಂದ ಸಮಾವೇಶ ಕುರಿತು ಸಭೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…

2 hours ago