ಮೈಸೂರು: ಅವರು ಅಧಿಕಾರಕ್ಕೆ ಬಂದರೆ ತಾನೇ ಹೆಸರು ಕಿತ್ತಾಕುವುದು ಎಂದು ನಾವು ಬಂದರೆ ಹೆಸರು ಕಿತ್ತಾಕುತ್ತೇವೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಸಿಎಂ, ಅವರು ಅಧಿಕಾರಕ್ಕೆ ಬಂದರೆ ತಾನೇ ಕಿತ್ತಾಕುವುದು ? ಜನರು ಆಶೀರ್ವಾದ ಮಾಡಿದ ಕಾರಣ ನಾನು ಸಿಎಂ ಆಗಿದ್ದೇನೆ. ಇವರಿಗೆ ಜನರೇ ಆಶೀರ್ವಾದ ಮಾಡುವುದಿಲ್ಲ. ಇವರು ಇನ್ನು ಎಲ್ಲಿ ಸಿಎಂ ಆಗುತ್ತಾರೆ. ಹೆಸರು ಬದಲಾವಣೆ ಮಾಡುವುದು ಭ್ರಮೆ ಎಂದು ಟಾಂಗ್ ಕೊಟ್ಟಿದ್ದಾರೆ.
ರಾಮನಗರ ಜಿಲ್ಲೆಯ ಹಸೆರು ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಮನಗರ ಜಿಲ್ಲೆಯ ಎಲ್ಲಾ ಮುಖಂಡರು ಬಂದಿದ್ರು. ಮೊದಲಿನಿಂದಲೂ ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಾಗಬೇಕು ಎಂಬುದು ಅವರ ಇಚ್ಚೆ. ಆ ಬಗ್ಗೆ ಮನವಿ ಕೊಟ್ಟಿದ್ದಾರೆ. ಕ್ಯಾಬಿನೆಟ್ ನಲ್ಲಿಟ್ಟು ತೀರ್ಮಾನ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದರು.
ಇದೇ ವೇಳೆ ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇಡಿ ದಾಳಿ ವಿಚಾರಕ್ಕೆ ಮಾತನಾಡಿ, ಇಡಿ ಅವರ ಕೆಲಸವನ್ನ ಅವರು ಮಾಡುತ್ತಾರೆ. ಇದರ ಬಗ್ಗೆ ನಾನು ಹೆಚ್ಚು ಹೇಳುವುದಿಲ್ಲ. ದಾಳಿ ಮಾಡಲಿ ನಾವು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ ಎಂದು ಹೇಳಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…