ಮೈಸೂರು

ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಸಿಎಂ ಸಿದ್ದರಾಮಯ್ಯ ನಿರಾಕರಣೆ

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ. ತನಿಖೆಯಲ್ಲಿ ತಪ್ಪಾಗಿದೆ ಎಂಬುವುದು ಗೊತ್ತಾದ್ರೆ ಎಲ್ಲರ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದ್ದಾರೆ.

ನಗರದಲ್ಲಿ ಮುಡಾ ಹೆಸರು ಹೇಳುತ್ತಿದಂತೆ ಗರಂ ಆದ ಸಿಎಂ ಸಿದ್ದರಾಮಯ್ಯ, ಎಷ್ಟು ಸಲ ಇದರ ಬಗ್ಗೆ ಹೇಳುವುದು. ಮುಡಾದಲ್ಲಿ 50:50 ರದ್ದಾಗಿದೆ. ನನ್ನ ಹೆಂಡತಿಯ ವಿಚಾರವನ್ನು ವಿವಾದ ಮಾಡುತ್ತಿದ್ದಾರೆ.ನಾನು ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಕೇಳಿಲ್ಲ. ನಮ್ಮ ಜಮೀನಿನನ್ನು ನಿಯಮಬಾಹಿರವಾಗಿ ಭೂಸ್ವಾಧೀನ ಮಾಡಿಕೊಂಡಿದ್ದಾರೆ. ಅದಕ್ಕೆ ಅವರೇ ತಪ್ಪಾಯಿತು ಎಂದು ಹೇಳಿ ಸೈಟ್ ಕೊಟ್ಟಿದ್ದಾರೆ. ಇದರಲ್ಲಿ ಯಾವ ವಿವಾದ ಇದೆ ಹೇಳಿ, ಸುಮ್ಮನೇ ಪ್ರತಿಭಟನೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳುತ್ತಿದ್ದಾರೆ ಎಂದರು.

ಅಲ್ಲದೆ ಮುಡಾ ಅಕ್ರಮದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ತಪ್ಪಾಗಿದೆ ಎಂಬುದು ಗೊತ್ತಾದರೇ ಎಲ್ಲರೂ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣ ಸಿಬಿಐಗೆ ವಹಿಸುವ ವಿಚಾರ‌ ನಮ್ಮ ಪೊಲೀಸರನೇ ಸಮರ್ಥರಿಲ್ವಾ..? ಎಲ್ಲದಕ್ಕೂ ಸಿಬಿಐ ಸಿಬಿಐ ಅನ್ನುವ ಬಿಜೆಪಿ ತಮ್ಮ ಅವಧಿಯಲ್ಲಿ ಎಷ್ಟು ಕೇಸ್ ನ್ನ ಸಿಬಿಐಗೆ ಕೊಟ್ಟಿದ್ದಾರೆ ಹೇಳಿ ಎಂದು ಪ್ರಶ್ನೆ ಮಾಡಿದರು.  ಜೊತೆಗೆ ಈಗಿನ ಸಿಬಿಐ ಮುಖ್ಯಸ್ಥ ಕೂಡ ಕರ್ನಾಟಕದಲ್ಲಿ ಕೆಲಸ ಮಾಡಿದವರು.ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ ಎಂದು ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

7 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

7 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

8 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

10 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

11 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

11 hours ago