ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ. ತನಿಖೆಯಲ್ಲಿ ತಪ್ಪಾಗಿದೆ ಎಂಬುವುದು ಗೊತ್ತಾದ್ರೆ ಎಲ್ಲರ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದ್ದಾರೆ.
ನಗರದಲ್ಲಿ ಮುಡಾ ಹೆಸರು ಹೇಳುತ್ತಿದಂತೆ ಗರಂ ಆದ ಸಿಎಂ ಸಿದ್ದರಾಮಯ್ಯ, ಎಷ್ಟು ಸಲ ಇದರ ಬಗ್ಗೆ ಹೇಳುವುದು. ಮುಡಾದಲ್ಲಿ 50:50 ರದ್ದಾಗಿದೆ. ನನ್ನ ಹೆಂಡತಿಯ ವಿಚಾರವನ್ನು ವಿವಾದ ಮಾಡುತ್ತಿದ್ದಾರೆ.ನಾನು ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಕೇಳಿಲ್ಲ. ನಮ್ಮ ಜಮೀನಿನನ್ನು ನಿಯಮಬಾಹಿರವಾಗಿ ಭೂಸ್ವಾಧೀನ ಮಾಡಿಕೊಂಡಿದ್ದಾರೆ. ಅದಕ್ಕೆ ಅವರೇ ತಪ್ಪಾಯಿತು ಎಂದು ಹೇಳಿ ಸೈಟ್ ಕೊಟ್ಟಿದ್ದಾರೆ. ಇದರಲ್ಲಿ ಯಾವ ವಿವಾದ ಇದೆ ಹೇಳಿ, ಸುಮ್ಮನೇ ಪ್ರತಿಭಟನೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳುತ್ತಿದ್ದಾರೆ ಎಂದರು.
ಅಲ್ಲದೆ ಮುಡಾ ಅಕ್ರಮದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ತಪ್ಪಾಗಿದೆ ಎಂಬುದು ಗೊತ್ತಾದರೇ ಎಲ್ಲರೂ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣ ಸಿಬಿಐಗೆ ವಹಿಸುವ ವಿಚಾರ ನಮ್ಮ ಪೊಲೀಸರನೇ ಸಮರ್ಥರಿಲ್ವಾ..? ಎಲ್ಲದಕ್ಕೂ ಸಿಬಿಐ ಸಿಬಿಐ ಅನ್ನುವ ಬಿಜೆಪಿ ತಮ್ಮ ಅವಧಿಯಲ್ಲಿ ಎಷ್ಟು ಕೇಸ್ ನ್ನ ಸಿಬಿಐಗೆ ಕೊಟ್ಟಿದ್ದಾರೆ ಹೇಳಿ ಎಂದು ಪ್ರಶ್ನೆ ಮಾಡಿದರು. ಜೊತೆಗೆ ಈಗಿನ ಸಿಬಿಐ ಮುಖ್ಯಸ್ಥ ಕೂಡ ಕರ್ನಾಟಕದಲ್ಲಿ ಕೆಲಸ ಮಾಡಿದವರು.ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…