ಮೈಸೂರು: ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಂದ ಪ್ರಾಷಿಕ್ಯೂಷನ್ ಭೀತಿ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಈ ಎಲ್ಲಾ ವಿಚಾರಗಳನ್ನು ಪಕ್ಕಕ್ಕಿಟ್ಟು ಕೆಲಕಾಲ ಮೈಸೂರಿನಲ್ಲಿ ಜಾಲಿ ಮೂಡ್ಗೆ ತೆರಳಿದ್ದಾರೆ.
ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ಸಿದ್ದರಾಮಯ್ಯ ಅವರ ನೂತನ ಮನೆ ನಿರ್ಮಾಣ ಕೆಲಸ ಕಾಮಗಾರಿಗಳನ್ನು ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ ಎಸ್ಕಾರ್ಟ್ ಬಿಟ್ಟು ಸ್ವತಂತ್ರವಾಗಿ ಮೈಸೂರಿನೆಲ್ಲೆಡೆ ಸುತ್ತಾಡಿದ್ದಾರೆ.
ಸಿದ್ದರಾಮಯ್ಯ ಅವರ ಖಾಸಗಿ ವಾಹನಕ್ಕೆ ಮಾಜಿ ಶಾಸಕ ಎಚ್.ಪಿ ಮಂಜುನಾಥ್ ಡ್ರೈವರ್ ಆಗಿ ಜೊತೆಯಲ್ಲಿದ್ದರು.
ಸಾರ್ವಜನಿಕ ಸ್ಥಳದಲ್ಲಿ ಕಾರ್ ನಿಲ್ಲಿಸಿ ಸ್ಥಳೀಯ ಅಂಗಡಿಯಲ್ಲಿ ಟೀ ಸವಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಬಂದ ಸಾರ್ವಜನಿಕರೊಂದಿಗೆ ನಗುನಗುತ್ತಲೇ ಮಾತನಾಡಿದ ಸಿಎಂ ಜನರ ಕಷ್ಟಗಳನ್ನು ಕೇಳಿದರು.
ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಡಾ ಹಗರಣವನ್ನು ಮುಂದಿಟ್ಟು ಮೈಸೂರು ಚಲೋ ಯಾತ್ರೆ ಮಾಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಇದಕ್ಕೆ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂಬದು ಗಮನಾರ್ಹ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…