ಮೈಸೂರು

ಕಾಲ್ತುಳಿತ ಪ್ರಕರಣ | ಐಪಿಎಸ್‌ ಅಧಿಕಾರಿಗಳ ಅಮಾನತು ಬಗ್ಗೆ ಸಿಎಂ ಹೇಳಿದ್ದೇನು?

ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸ್‌ ಅಧಿಕಾರಿಗಳ ಅಮಾನತು ನಿರ್ಧಾರವನ್ನು ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ ಕರ್ತವ್ಯ ಲೋಪ ಮೇರೆಗೆ ಅವರ ಮೇಲೆ ಕ್ರಮವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅಂದಿನ ದಿನ ಕಾಲ್ತುಳಿತ ಸಂಭವಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು 3:50ರಲ್ಲಿ, ಪೊಲೀಸರು ನನಗೆ ಮಾಹಿತಿ ನೀಡಿದ್ದು 5:45 ರಲ್ಲಿ. ಆದ್ದರಿಂದ ಯಾರ್ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕ್ರಮ ವಹಿಸಿದ್ದೇವೆ. ನಗರ ಪೊಲೀಸ್ ಆಯುಕ್ತರು ನನಗೆ ಮೊದಲು ಮಾಹಿತಿ ನೀಡಬೇಕಿತ್ತು. ಆದರೆ ನನಗೆ ಮಾಹಿತಿ ನೀಡಿಲ್ಲ. ಕರ್ತವ್ಯ ಲೋಪ ಮಾಡಿದವರ ಮೇಲೆ ಕ್ರಮವಾಗಿದೆ ಎಂದು ಹೇಳಿದ್ದಾರೆ.

ವಿಧಾನಸೌಧದ ಮುಂಭಾಗ ಕಾರ್ಯಕ್ರಮ ಏರ್ಪಡಿಸುವ ಸಂಬಂದ ರಾಜ್ಯದ ಮುಖ್ಯ ಕಾರ್ಯದರ್ಶಿ ನನ್ನೊಂದಿಗೆ ಮಾತನಾಡಿದ್ದರು. ಪೊಲೀಸರು ಸೂಕ್ತ ಬಂದೋಬಸ್ತ್ ವಹಿಸಿದ್ದರೆ ಕಾರ್ಯಕ್ರಮ ಮಾಡಿ ಎಂದು ಹೇಳಿದ್ದೆ. ಅಲ್ಲಿ ರಾಜ್ಯಪಾಲರು ಕೂಡ ಭಾಗವಹಸಿದ್ದರು. ಅಲ್ಲಿ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ ಎಂದರು.

ತಮ್ಮ ರಾಜೀನಾಮೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ಪ್ರಕರಣದಲ್ಲಿ ಸರ್ಕಾರದ್ದೇನು ತಪ್ಪಿಲ್ಲ. ಎಚ್.ಡಿ ಕುಮಾರಸ್ವಾಮಿ ಸುಖಾಸುಮ್ಮನೆ ವೃತಾ ಆರೋಪ ಮಾಡುತ್ತಿದ್ದಾರೆ. ಕುಮಾರಸ್ವಾಮಿಗೆ ಇದ್ದಕ್ಕಿದ್ದ ಹಾಗೆ ಪೋಲೀಸರ ಮೇಲೆ ಪ್ರೀತಿ ಹುಟ್ಟಿದೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ – ಜೆಡಿಎಸ್ ನಾಯಕರು ಒತ್ತಾಯಿಸಿದಂತೆ ನ್ಯಾಯಾಂಗ ತನಿಖೆಯಾಗುತ್ತಿದೆ. ನಾವು ವಿಧಾನಸೌಧದ ಬಳಿ ನಡೆಸಿದ ಕಾರ್ಯಕ್ರಮದಲ್ಲಿ ಯಾವುದೇ ಅನಾಹುತ ನಡೆದಿಲ್ಲ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿಯಾಗಿದ್ದರು. ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಬಂದಿರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಪ್ರಧಾನಿ ರಾಜೀನಾಮೆ ನೀಡಿದ್ರಾ?
ಇನ್ನೂ ಬಿಜೆಪಿ ನಾಯಕರು ತಮ್ಮ ರಾಜೀನಾಮೆ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಕುಂಭಮೇಳದಲ್ಲಿ ಜನ ಸಾವನ್ನಪ್ಪಿದಾಗ ಪ್ರಧಾನಿ ರಾಜೀನಾಮೆ ನೀಡಿದ್ರಾ? ಆಗ ತಾನೆ ಉದ್ಘಾಟನೆಯಾದ ಸೇತುವೆ ಬಿದ್ದಾಗ ಯಾರಾದ್ರೂ ಪ್ರಧಾನಿಯನ್ನಾ ರಾಜೀನಾಮೆ ಕೇಳುದ್ರಾ.? ಆಗ ಕುಮಾರಸ್ವಾಮಿ ರಾಜೀನಾಮೆ ಕೇಳಬಹುದಿತ್ತಲ್ಲವೇ. ಸುಮ್ಮನೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಅಷ್ಟೇ ಎಂದು ಮೈತ್ರಿ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

35 mins ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

46 mins ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

2 hours ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

2 hours ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

2 hours ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

2 hours ago