ಮೈಸೂರು

ಕಾಲ್ತುಳಿತ ಪ್ರಕರಣ | ಐಪಿಎಸ್‌ ಅಧಿಕಾರಿಗಳ ಅಮಾನತು ಬಗ್ಗೆ ಸಿಎಂ ಹೇಳಿದ್ದೇನು?

ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸ್‌ ಅಧಿಕಾರಿಗಳ ಅಮಾನತು ನಿರ್ಧಾರವನ್ನು ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ ಕರ್ತವ್ಯ ಲೋಪ ಮೇರೆಗೆ ಅವರ ಮೇಲೆ ಕ್ರಮವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅಂದಿನ ದಿನ ಕಾಲ್ತುಳಿತ ಸಂಭವಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು 3:50ರಲ್ಲಿ, ಪೊಲೀಸರು ನನಗೆ ಮಾಹಿತಿ ನೀಡಿದ್ದು 5:45 ರಲ್ಲಿ. ಆದ್ದರಿಂದ ಯಾರ್ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕ್ರಮ ವಹಿಸಿದ್ದೇವೆ. ನಗರ ಪೊಲೀಸ್ ಆಯುಕ್ತರು ನನಗೆ ಮೊದಲು ಮಾಹಿತಿ ನೀಡಬೇಕಿತ್ತು. ಆದರೆ ನನಗೆ ಮಾಹಿತಿ ನೀಡಿಲ್ಲ. ಕರ್ತವ್ಯ ಲೋಪ ಮಾಡಿದವರ ಮೇಲೆ ಕ್ರಮವಾಗಿದೆ ಎಂದು ಹೇಳಿದ್ದಾರೆ.

ವಿಧಾನಸೌಧದ ಮುಂಭಾಗ ಕಾರ್ಯಕ್ರಮ ಏರ್ಪಡಿಸುವ ಸಂಬಂದ ರಾಜ್ಯದ ಮುಖ್ಯ ಕಾರ್ಯದರ್ಶಿ ನನ್ನೊಂದಿಗೆ ಮಾತನಾಡಿದ್ದರು. ಪೊಲೀಸರು ಸೂಕ್ತ ಬಂದೋಬಸ್ತ್ ವಹಿಸಿದ್ದರೆ ಕಾರ್ಯಕ್ರಮ ಮಾಡಿ ಎಂದು ಹೇಳಿದ್ದೆ. ಅಲ್ಲಿ ರಾಜ್ಯಪಾಲರು ಕೂಡ ಭಾಗವಹಸಿದ್ದರು. ಅಲ್ಲಿ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ ಎಂದರು.

ತಮ್ಮ ರಾಜೀನಾಮೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ಪ್ರಕರಣದಲ್ಲಿ ಸರ್ಕಾರದ್ದೇನು ತಪ್ಪಿಲ್ಲ. ಎಚ್.ಡಿ ಕುಮಾರಸ್ವಾಮಿ ಸುಖಾಸುಮ್ಮನೆ ವೃತಾ ಆರೋಪ ಮಾಡುತ್ತಿದ್ದಾರೆ. ಕುಮಾರಸ್ವಾಮಿಗೆ ಇದ್ದಕ್ಕಿದ್ದ ಹಾಗೆ ಪೋಲೀಸರ ಮೇಲೆ ಪ್ರೀತಿ ಹುಟ್ಟಿದೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ – ಜೆಡಿಎಸ್ ನಾಯಕರು ಒತ್ತಾಯಿಸಿದಂತೆ ನ್ಯಾಯಾಂಗ ತನಿಖೆಯಾಗುತ್ತಿದೆ. ನಾವು ವಿಧಾನಸೌಧದ ಬಳಿ ನಡೆಸಿದ ಕಾರ್ಯಕ್ರಮದಲ್ಲಿ ಯಾವುದೇ ಅನಾಹುತ ನಡೆದಿಲ್ಲ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿಯಾಗಿದ್ದರು. ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಬಂದಿರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಪ್ರಧಾನಿ ರಾಜೀನಾಮೆ ನೀಡಿದ್ರಾ?
ಇನ್ನೂ ಬಿಜೆಪಿ ನಾಯಕರು ತಮ್ಮ ರಾಜೀನಾಮೆ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಕುಂಭಮೇಳದಲ್ಲಿ ಜನ ಸಾವನ್ನಪ್ಪಿದಾಗ ಪ್ರಧಾನಿ ರಾಜೀನಾಮೆ ನೀಡಿದ್ರಾ? ಆಗ ತಾನೆ ಉದ್ಘಾಟನೆಯಾದ ಸೇತುವೆ ಬಿದ್ದಾಗ ಯಾರಾದ್ರೂ ಪ್ರಧಾನಿಯನ್ನಾ ರಾಜೀನಾಮೆ ಕೇಳುದ್ರಾ.? ಆಗ ಕುಮಾರಸ್ವಾಮಿ ರಾಜೀನಾಮೆ ಕೇಳಬಹುದಿತ್ತಲ್ಲವೇ. ಸುಮ್ಮನೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಅಷ್ಟೇ ಎಂದು ಮೈತ್ರಿ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

3 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

8 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

8 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

8 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

9 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

9 hours ago